ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಿಲ್ಲೆ

ರಾಹುಲ್‌ ಗಾಂಧಿ 40 ದಿನದಿಂದ ಕಾಣೆ; ಡಿಕೆಶಿ ಹುಡುಕುತ್ತಿದ್ದಾರೆ ಎಂದು ಪ್ರಲ್ಹಾದ್‌ ಜೋಶಿ ಲೇವಡಿ

ರಾಹುಲ್‌ ಗಾಂಧಿ 40 ದಿನದಿಂದ ಕಾಣೆ: ಪ್ರಲ್ಹಾದ್‌ ಜೋಶಿ

Pralhad Joshi: ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ 40 ದಿನ ಕಳೆದರೂ ಪೂರ್ಣ ಸಚಿವ ಸಂಪುಟ ರಚನೆ ಮಾಡಲಾಗಿಲ್ಲ. ರಾಹುಲ್‌ ಗಾಂಧಿಗಾಗಿ ಕಾಯುತ್ತಿದ್ದಾರೆ. ಆದರೆ, ಅವರು ನೋಡಿದರೆ ಕಾಣೆಯಾಗಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ ಮಾಡಿದ್ದಾರೆ.

ಮಧುಗಿರಿ ರೈಲ್ವೆ ನಿಲ್ದಾಣ, ಸರಕು ಸಾಗಾಣಿಕೆ ವಿಭಾಗದ ಕಾಮಗಾರಿಗೆ ಸಚಿವ ವಿ. ಸೋಮಣ್ಣ, ಶಾಸಕ ಕೆ.ಎನ್. ರಾಜಣ್ಣ ಶಂಕುಸ್ಥಾಪನೆ

ಮಧುಗಿರಿ ರೈಲ್ವೆ ನಿಲ್ದಾಣ ಕಾಮಗಾರಿಗೆ ಸಚಿವ ವಿ. ಸೋಮಣ್ಣ ಶಂಕುಸ್ಥಾಪನೆ

Madhugiri News: ಮಧುಗಿರಿ ತಾಲೂಕಿನ ಜನತೆಯ ಬಹುಬೇಡಿಕೆಯಾಗಿದ್ದ ಮಹತ್ವಾಕಾಂಕ್ಷೆ ಯೋಜನೆ ತುಮಕೂರು-ರಾಯದುರ್ಗ ರೈಲ್ವೆ ಹೊಸ ಮಾರ್ಗದ ಮಧುಗಿರಿ ರೈಲ್ವೆ ನಿಲ್ದಾಣ ಹಾಗೂ ಸರಕು ಸಾಗಾಣಿಕೆ ವಿಭಾಗದ ಕಾಮಗಾರಿಗೆ ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ಹಾಗೂ ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್. ರಾಜಣ್ಣ ಶಂಕುಸ್ಥಾಪನೆ ನೆರವೇರಿಸಿದರು.

Haveri Rain: ಹಾವೇರಿ ಜಿಲ್ಲೆಯಾದ್ಯಂತ ಉತ್ತಮ ಮಳೆ; ಬರದ ಆತಂಕದಲ್ಲಿದ್ದ ರೈತರ ಮುಖದಲ್ಲಿ ಸಂತಸ

ಹಾವೇರಿ ಜಿಲ್ಲೆಯಾದ್ಯಂತ ಉತ್ತಮ ಮಳೆ; ರೈತರಲ್ಲಿ ಸಂತಸ

Haveri News: ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾನಗಲ್, ಸವಣೂರು, ಶಿಗ್ಗಾಂವಿ, ರಾಣೆಬೆನ್ನೂರು ಹಾಗೂ ಹಿರೇಕೆರೂರು ಸೇರಿದಂತೆ ಬಹುತೇಕ ಎಲ್ಲಾ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಜಿಲ್ಲಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬಿದ್ದು, ಅನ್ನದಾತರಲ್ಲಿ ಸಂತಸ ಮೂಡಿಸಿದೆ.

ಕೈಗಾ ಅಣು ವಿದ್ಯುತ್ ಸ್ಥಾವರ: ಇತಿಹಾಸದಲ್ಲೇ ಅತಿ ದೊಡ್ಡ ಏಕಶಿಲಾ ಕಾಂಕ್ರೀಟ್ ಕಾಮಗಾರಿ ಪೂರ್ಣಗೊಳಿಸಿದ ‘ಮೇಘಾ ಎಂಜಿನಿಯರಿಂಗ್‌’

ಅತಿ ದೊಡ್ಡ ಏಕಶಿಲಾ ಕಾಂಕ್ರೀಟ್ ಕಾಮಗಾರಿ ಪೂರ್ಣಗೊಳಿಸಿದ MEIL

MEIL: ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕಗಳ ‘ಪ್ರೆಶರೈಸ್ಡ್ ಹೆವಿ ವಾಟರ್ ರಿಯಾಕ್ಟರ್ʼ ಯೋಜನೆಗಾಗಿ ಭಾರತೀಯ ಪರಮಾಣು ವಿದ್ಯುತ್ ನಿಗಮದ ಇತಿಹಾಸದಲ್ಲೇ ಅತ್ಯಂತ ಬೃಹತ್ ಪ್ರಮಾಣದ ಏಕಶಿಲಾ (ಮೊನೊಲಿಥಿಕ್) ಕಾಂಕ್ರೀಟ್ ಹಾಕುವ ಕಾಮಗಾರಿಯನ್ನು ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ಸಂಸ್ಥೆ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

Haveri News: ದೇವಗಿರಿ ಗ್ರಾ.ಪಂ. ಪಿಡಿಒ ಸುನಿತಾ ಗರಡಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ

ದೇವಗಿರಿ ಗ್ರಾ.ಪಂ. ಪಿಡಿಒ ಸುನಿತಾ ಗರಡಿಗೆ ಸರ್ವೋತ್ತಮ ಪ್ರಶಸ್ತಿ

Haveri News: ಹಾವೇರಿ ನಗರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದೇವಗಿರಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸುನೀತಾ ಗರಡಿ ಅವರಿಗೆ ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

​ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣ ವಿರೋಧಿಸಿ ಜುಲೈ 16ಕ್ಕೆ ಬೃಹತ್‌ ಪ್ರತಿಭಟನೆ: ಬೊಮ್ಮಾಯಿ

ತುಷ್ಟೀಕರಣ ರಾಜಕಾರಣ ವಿರೋಧಿಸಿ ಜುಲೈ 16ಕ್ಕೆ ಬಿಜೆಪಿ ಪ್ರತಿಭಟನೆ

Basavaraj Bommai: ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣ, ಕೋಮು ಸೌಹಾರ್ದತೆ ಕೆಡಿಸುವ ಸಂಚು ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ವಿರುದ್ಧ ಬರುವ ಜುಲೈ 16ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Madhugiri News: ಫ.ಗು.ಹಳಕಟ್ಟಿ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ಪ್ರೊ.ಡಿ.ಎಸ್. ಮುನೀಂದ್ರ ಕುಮಾರ್

ಫ.ಗು.ಹಳಕಟ್ಟಿ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ಮುನೀಂದ್ರ ಕುಮಾರ್

Madhugiri News: ಮಧುಗಿರಿ ಪಟ್ಟಣದ ಗೌತಮಬುದ್ಧ ಪದವಿಪೂರ್ವ ಕಾಲೇಜಿನಲ್ಲಿ ಫ.ಗು.ಹಳಕಟ್ಟಿ ಮತ್ತು ಛತ್ರಪತಿ ಶಾಹು ಮಹಾರಾಜ್ ಅವರ ಜನ್ಮದಿನಾಚರಣೆ ಜರುಗಿತು. ಈ ಸಮಾರಂಭದಲ್ಲಿ ಅಚಲ ಕಲ್ಚರಲ್ ಫೌಂಡೇಶನ್‌ನ ಆಧ್ಯಕ್ಷ, ನಿವೃತ್ತ ಪ್ರಾಂಶುಪಾಲ ಪ್ರೊ.ಡಿ.ಎಸ್. ಮುನೀಂದ್ರ ಕುಮಾರ್ ಮಾತನಾಡಿದ್ದಾರೆ.

ಕಾನೂನುಬಾಹಿರವಾಗಿ ಮಾದರ ಮಹಾಸಭಾ ಕಾರ್ಯದರ್ಶಿ‌ ಸ್ಥಾನದಿಂದ ವಜಾ: ಡಾ. ಬಾಣದರಂಗಯ್ಯ ಆರೋಪ

ಕಾನೂನುಬಾಹಿರವಾಗಿ ಮಾದರ ಮಹಾಸಭಾ ಕಾರ್ಯದರ್ಶಿ‌ಯ ವಜಾ

Madhugiri News: ಕಾನೂನು ನಿಯಮ ಗಾಳಿಗೆ ತೂರಿ ಸಂಘದ‌ ಬೈಲಾ‌ ನಿಯಮಗಳಿಗೆ ವಿರುದ್ದವಾಗಿ ಯಾವುದೇ ಸೂಚನೆ‌ ನೀಡದೆ,‌ ಗಮನಕ್ಕೂ ಸಹ ತಾರದೆ ಏಕಾಏಕಿ ನನ್ನನ್ನು ಮಾದರ ಮಹಾಸಭಾ ಕಾರ್ಯದರ್ಶಿ‌ ಸ್ಥಾನದಿಂದ‌ ತೆಗೆದು ಹಾಕಲಾಗಿದೆ ಎಂದು‌ ಮಾಜಿ ಗ್ರಾ.ಪಂ.ಅಧ್ಯಕ್ಷ, ವಕೀಲ ಡಾ. ಬಾಣದರಂಗಯ್ಯ ಆರೋಪಿಸಿದ್ದಾರೆ.

ದೇಶದಲ್ಲೇ ಮೊದಲು: ರೈತರ ಸಾಂಪ್ರದಾಯಿಕ ಕೃಷಿಜ್ಞಾನಕ್ಕೆ ವಿವಿ ಸರ್ಟಿಫಿಕೇಟ್: ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಣೆ

ರೈತರ ಸಾಂಪ್ರದಾಯಿಕ ಕೃಷಿಜ್ಞಾನಕ್ಕೆ ವಿವಿ ಸರ್ಟಿಫಿಕೇಟ್: ಮಧುಸೂದನ ಸಾಯಿ

Sadhguru Shri Madhusudan Sai: ಸಾಂಪ್ರದಾಯಿಕ ಕೃಷಿ ಜ್ಞಾನ ಮತ್ತು ಪ್ರಾಯೋಗಿಕ ಕೌಶಲ್ಯವನ್ನು ಆಧರಿಸಿ ರಾಜ್ಯದ ರೈತರಿಗೆ ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಮೂಲಕ ಪ್ರಮಾಣಪತ್ರ ನೀಡುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು 'ಒಂದು ಜಗತ್ತು ಒಂದು ಕುಟುಂಬ' ಮಾನವೀಯ ಸೇವಾ ಅಭಿಯಾನದ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಿಸಿದ್ದಾರೆ.

ಹಾವೇರಿಯ ಗುತ್ತಲ ವ್ಯಾಪ್ತಿಯಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳ ದಾಳಿ: ಪ್ರಕರಣ ದಾಖಲು

ಗುತ್ತಲ ವ್ಯಾಪ್ತಿಯಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳ ದಾಳಿ

Haveri News: ಹಾವೇರಿ ತಾಲೂಕಿನ ಗುತ್ತಲ ವ್ಯಾಪ್ತಿಯಲ್ಲಿ ಹರಿಯುವ ತುಂಗಭದ್ರಾ‌ ತೀರದಲ್ಲಿ ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿರುವ ಹಾವೇರಿಯ ಗಣಿ ಮತ್ತು ಭೂ ವಿಜ್ಞಾನ ಹಿರಿಯ ಅಧಿಕಾರಿಗಳು, 80 ಟನ್ ಮರಳು ಹಾಗೂ ಎರಡು ತೆಪ್ಪಗಳು ಸೇರಿದಂತೆ ಲಾರಿಗಳನ್ನು ವಶಪಡಿಸಿಕೊಂಡಿರುವ ಘಟನೆ ಜರುಗಿದೆ.

Pavagada News: ಪಾವಗಡದಲ್ಲಿ ಶ್ರದ್ಧಾ-ಭಕ್ತಿಯಿಂದ ಮೊಹರಂ ಆಚರಣೆ

ಪಾವಗಡದಲ್ಲಿ ಶ್ರದ್ಧಾ-ಭಕ್ತಿಯಿಂದ ಮೊಹರಂ ಆಚರಣೆ

Pavagada News: ಹಿಂದೂ-ಮುಸ್ಲಿಮರ ಭಾವೈಕ್ಯತೆ, ಸೌಹಾರ್ದತೆ ಮತ್ತು ಸಹಬಾಳ್ವೆಯ ಪ್ರತೀಕವಾಗಿರುವ ಮೊಹರಂ ಹಬ್ಬವನ್ನು ಪಟ್ಟಣದಲ್ಲಿ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಂಜಾಗಳ ಮೆರವಣಿಗೆ, ಸಾಂಪ್ರದಾಯಿಕ ವಾದ್ಯಗಳ ನಾದ ಹಾಗೂ ಭಕ್ತರ ಜಯಘೋಷಗಳು ಹಬ್ಬದ ಮೆರುಗನ್ನು ಮತ್ತಷ್ಟು ಹೆಚ್ಚಿಸಿವೆ.

ಎಂಎಲ್‌ಸಿ ಡಾ.ಬಿ.ಜಿ.ಪಾಟೀಲ್‌ಗೆ ಮಾತೃ ವಿಯೋಗ

ಎಂಎಲ್‌ಸಿ ಡಾ.ಬಿ.ಜಿ.ಪಾಟೀಲ್‌ಗೆ ಮಾತೃ ವಿಯೋಗ

Veeramma Dr Galangalappa Patil: ಖ್ಯಾತ ಉದ್ಯಮಿ ದಿ. ಡಾ.ಗಳಂಗಳಪ್ಪ ಪಾಟೀಲ್ ಅವರ ಪತ್ನಿ ವೀರಮ್ಮನವರು ಪತಿಯ ಹಿಂದಿನ ಶಕ್ತಿಯಾಗಿ ನಿಂತು, ಉದ್ಯಮ ಸಾಮ್ರಾಜ್ಯ ನಿರ್ಮಾಣ ಮಾಡಲು ಬೆನ್ನೆಲುಬಾಗಿ ಕೈಜೋಡಿಸಿದ್ದರು. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

4 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ; ಸಮಯ ನೋಡಿಕೊಂಡು ಕ್ರಮ ಎಂದ ಎಚ್.ಡಿ.ಕುಮಾರಸ್ವಾಮಿ

ಕ್ರಾಸ್ ವೋಟಿಂಗ್ ಮಾಡಿದವರ ವಿರುದ್ಧ ಕ್ರಮ: ಎಚ್‌ಡಿಕೆ

HD Kumaraswamy: ನನಗೆ ಎಲ್ಲವೂ ಗೊತ್ತಿದ್ದೇ ನಾನು ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಯಾರ ಯಾರ ಆತ್ಮಸಾಕ್ಷಿ ಹೇಗೆಲ್ಲ ವರ್ತನೆ ಮಾಡುತ್ತದೆ ಎಂಬುದನ್ನು ಪರೀಕ್ಷೆ ಮಾಡಲು ಪಕ್ಷದ ಅಭ್ಯರ್ಥಿಯನ್ನು ನಾನು ಕಣಕ್ಕೆ ಇಳಿಸಬೇಕಾಯಿತು. ಎಲ್ಲವೂ ನಾನು ಅಂದುಕೊಂಡಂತೆ ಆಗಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಹೇಗೆ ಕಟ್ಟಬೇಕು ಎಂಬುದು ನಮಗೆ ತಿಳಿದಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Lokayukta Raid: ಲಂಚ ಸ್ವೀಕರಿಸುತ್ತಿದ್ದ ಸಿಎಂ ಪದಕ ವಿಜೇತ ಅಧಿಕಾರಿ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ, ಎಸ್‌ಬಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಅಕ್ಕಿ ವ್ಯಾಪಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸಹಕಾರ ನೀಡಲು ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ವಿಶೇಷ ಶಾಖೆ (ಎಸ್‌ಬಿ) ಸಿಬ್ಬಂದಿ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಚ್ಚರಿ ಎಂದರೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಈ ಹಿಂದೆ ಗಂಭೀರ ಪ್ರಕರಣಗಳ ತನಿಖೆ ಹಾಗೂ ಆರೋಪಿಗಳ ಬಂಧನದಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರ್ಪಡಿಸಿದ್ದರು.

ಜೂನ್‌ 21ರಂದು ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವ, ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ

ಜೂನ್‌ 21ರಂದು ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವ

Madhugiri News: ಸಸ್ಯಕಾಶಿ, ಸಿದ್ದರ ತಪೋಭೂಮಿಯಲ್ಲಿ ಜೂನ್‌ 21ರಂದು ನಡೆಯಲಿದರುವ ಬಾಳೆಹೊನ್ನೂರು ಖಾಸಾ ಶಾಖಾ ಮಠ, ಸಿದ್ದರಬೆಟ್ಟದ 20ನೇ ವಾರ್ಷಿಕೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ ಎಂದು ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

Tumkur News: ಪರಿಶ್ರಮದಿಂದ ಯಶಸ್ಸು ಸಾಧ್ಯ: ಡಾ. ನಾಗಲಕ್ಷ್ಮಿ ಚೌಧರಿ

ಪರಿಶ್ರಮದಿಂದ ಯಶಸ್ಸು ಸಾಧ್ಯ: ಡಾ. ನಾಗಲಕ್ಷ್ಮಿ ಚೌಧರಿ

Tumkur News: ತುಮಕೂರಿನ ಸದಾಶಿವ ನಗರದ ರಸ್ತೆಯಲ್ಲಿರುವ ಶ್ರೀ ಮಾರುತಿ ಮಹಾರಾಜ್ ಕನ್ವೆನ್ಷನ್ ಹಾಲ್‌ನಲ್ಲಿ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭಾಗಿಯಾಗಿ, ಮಾತನಾಡಿದ್ದಾರೆ.

ಹೊಸಪೇಟೆಯಲ್ಲಿ ನೂತನ ಇಎಸ್ಐ ಆಸ್ಪತ್ರೆ ಸ್ಥಾಪಿಸಿ; ಸಂಸದ ಈ. ತುಕಾರಾಂಗೆ ಮನವಿ

ಹೊಸಪೇಟೆಯಲ್ಲಿ ನೂತನ ಇಎಸ್ಐ ಆಸ್ಪತ್ರೆ ಸ್ಥಾಪಿಸಲು ಮನವಿ

Vijayanagara News: ಹೊಸಪೇಟೆಗೆ ನೂತನ ಇಎಸ್ಐ (ESI) ಆಸ್ಪತ್ರೆ ಸ್ಥಾಪಿಸಲು ಸಂಸದ ಈ. ತುಕಾರಾಂ ಅವರಿಗೆ ವಿಜಯನಗರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Kalaburagi News: ಹಲ್ಲಿ ಬಿದ್ದ ನೀರು ಸೇವಿಸಿ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಹಲ್ಲಿ ಬಿದ್ದ ನೀರು ಸೇವಿಸಿ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ

Kalaburagi News: ಕಲಬುರಗಿಯ ಗುಲ್ಬರ್ಗ ವಿಶ್ವವಿದ್ಯಾಲಯದ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕರ ವಸತಿ ನಿಲಯದಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ಹಲ್ಲಿ ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

Veeraloka pustaka santhe: ತುಮಕೂರಿನಲ್ಲಿ ಜೂ.26ರಿಂದ 3 ದಿನ ʼವೀರಲೋಕ ಪುಸ್ತಕ ಸಂತೆʼ; ಲೋಗೋ ಬಿಡುಗಡೆ ಮಾಡಿದ ಡಿಸಿ ಶುಭ ಕಲ್ಯಾಣ್

ತುಮಕೂರಿನಲ್ಲಿ ಜೂ.26ರಿಂದ 3 ದಿನ ʼವೀರಲೋಕ ಪುಸ್ತಕ ಸಂತೆʼ

Tumkur News: ತುಮಕೂರು ನಗರದ ಗಾಜಿನ ಮನೆಯಲ್ಲಿ ಇದೇ ಜೂನ್‌ 26, 27 ಮತ್ತು 28 ರಂದು ವೀರಲೋಕ ಪ್ರತಿಷ್ಠಾನ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರದೊಂದಿಗೆ ಹಮ್ಮಿಕೊಂಡಿರುವ 5ನೇ ಆವೃತ್ತಿಯ ಬೃಹತ್ ‘ವೀರಲೋಕ ಪುಸ್ತಕ ಸಂತೆ' ಸಾಂಸ್ಕೃತಿಕ ಹಬ್ಬದ ಲೋಗೋವನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗುರುವಾರ ಬಿಡುಗಡೆ ಮಾಡಿದರು.

10 ಕೋಟಿ ರುಪಾಯಿಗೂ ಅಧಿಕ ರಾಯಧನ ಬಾಕಿ: ಶಾಸಕ ವೆಂಕಟೇಶ್ ಒಡೆತನದ ಕಲ್ಲುಗಣಿ ಗುತ್ತಿಗೆ ರದ್ದು

ಪಾವಗಡ ಶಾಸಕ ವೆಂಕಟೇಶ್ ಒಡೆತನದ ಕಲ್ಲುಗಣಿ ಗುತ್ತಿಗೆ ರದ್ದು

Pavagada MLA Venkatesh: ಸರ್ಕಾರಿ ನಿಯಮ ಉಲ್ಲಂಘಿಸಿ 10 ಕೋಟಿ ರುಪಾಯಿಗೂ ಅಧಿಕ ರಾಯಧನ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ಪಾವಗಡ ತಾಲೂಕಿನ ತಿಪ್ಪಯ್ಯನದುರ್ಗದಲ್ಲಿರುವ ಪಾವಗಡ ಕಾಂಗ್ರೆಸ್ ಶಾಸಕ ವೆಂಕಟೇಶ್, ಪತ್ನಿ ಶಶಿಕಲಾ ಒಡೆತನದ ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಆದೇಶಿಸಿದೆ.

ಗ್ರಾಮಗಳತ್ತ ಲಕ್ಷ್ಮೀ ಹೆಬ್ಬಾಳ್ಕರ್ ಹೆಜ್ಜೆ; ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ

ಗ್ರಾಮಗಳಿಗೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ಪರಿಶೀಲನೆ

Laxmi Hebbalkar: ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ತಮ್ಮ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು. ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವುದರ ಜತೆಗೆ ತಾವೇ ಗ್ರಾಮಗಳಿಗೆ ತೆರಳಿ ಅಲ್ಲಿನ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸುತ್ತಿದ್ದು, ಜನರ ಅಗತ್ಯಗಳು ಹಾಗೂ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ನೇರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಬೆಳಗ್ಗೆ 10 ಗಂಟೆಯೊಳಗೆ ಸಿಬ್ಬಂದಿ ಹಾಜರಿರಬೇಕು, ಗುರುತಿನ ಚೀಟಿ ಕಡ್ಡಾಯ: ಚಿಕ್ಕನಾಯಕನಹಳ್ಳಿ ತಾಪಂನೂತನ ಇಒ ಶಿವರಾಜಯ್ಯ ಖಡಕ್ ಸೂಚನೆ

ಬೆಳಗ್ಗೆ 10 ಗಂಟೆಯೊಳಗೆ ಸಿಬ್ಬಂದಿ ಹಾಜರಿರಬೇಕು: ಇಒ ಶಿವರಾಜಯ್ಯ ಸೂಚನೆ

Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿ ಕಚೇರಿಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಬೆಳಿಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಅಲ್ಲದೆ, ಕರ್ತವ್ಯದ ಅವಧಿಯಲ್ಲಿ ಸರ್ಕಾರ ನೀಡಿರುವ ಅಧಿಕೃತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಿರಬೇಕು ಎಂದು ತಾಲೂಕು ಪಂಚಾಯಿತಿಯ ನೂತನ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಜಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

Haveri News: ಹಾವೇರಿಯಲ್ಲಿ ಹದಗೆಟ್ಟ ಹಳ್ಳಿ ರಸ್ತೆಗಳು; ದುರಸ್ತಿಗೆ ಸಾರ್ವಜನಿಕರ ಆಗ್ರಹ

ಹಾವೇರಿಯಲ್ಲಿ ಹದಗೆಟ್ಟ ಹಳ್ಳಿ ರಸ್ತೆಗಳು; ದುರಸ್ತಿಗೆ ಸಾರ್ವಜನಿಕರ ಆಗ್ರಹ

Haveri News: ಹಾವೇರಿ ತಾಲೂಕಿನ ಅನೇಕ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ತೀರಾ ಹದಗೆಟ್ಟು ಹೋಗಿವೆ. ಕಳೆದ ಬಾರಿಯ ಮಳೆಯಿಂದಾಗಿ ರಸ್ತೆಗಳು ಹಾಳಾಗಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ. ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

Haveri Rains: ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ; ಹಲವಡೆ ಸಂಚಾರಕ್ಕೆ ಅಡ್ಡಿ, ಮನೆಗಳಿಗೆ ನೀರು ನುಗ್ಗಿ ಹಾನಿ

ಹಾವೇರಿಯಲ್ಲಿ ಮುಂಗಾರು ಮಳೆ ಅಬ್ಬರ; ಹಲವಡೆ ಸಂಚಾರಕ್ಕೆ ಅಡ್ಡಿ

Haveri News: ಹಾವೇರಿ ಜಿಲ್ಲೆಯ ಹಲವೆಡೆ ಶನಿವಾರ ಭಾರಿ ಮಳೆಯಾಗಿದೆ. ಅಗಡಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಅಡ್ಡಲಾಗಿ ಹರಿಯುವ ಹಳ್ಳವು ಭಾರೀ ಮಳೆಗೆ ತುಂಬಿ ಹರಿದ ಹಿನ್ನೆಲೆ ವಾಹನ ಸಂಚಾರಕ್ಕೆ ಸ್ಥಗಿತಗೊಂಡಿತ್ತು. ಇನ್ನು ಗ್ರಾಮದಲ್ಲಿ ಮನೆಗಳಿಗೆ‌ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಸಿದೆ.

Loading...