ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಿಲ್ಲೆ

Pavagada News: ಮಕ್ಕಳ ಸೇವೆಯಲ್ಲಿ ಸಾರ್ಥಕ ಪಯಣ; ಪಾವಗಡದ ನಿವೃತ್ತ ಅಂಗನವಾಡಿ ಕಾರ್ಯಕರ್ತೆಗೆ ಅದ್ಧೂರಿ ಬೀಳ್ಕೊಡುಗೆ

ನಿವೃತ್ತ ಅಂಗನವಾಡಿ ಕಾರ್ಯಕರ್ತೆಗೆ ಅದ್ದೂರಿ ಬೀಳ್ಕೊಡುಗೆ

Pavagada News: ಪಾವಗಡ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಗುಲ್ಜಾರ್ ಬಾನು ಅವರಿಗೆ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರ ವತಿಯಿಂದ ಅದ್ಧೂರಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ಈ ಕುರಿತ ವಿವರ ಇಲ್ಲಿದೆ.

Tumkur News: ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಬಳಿ ಶೀಘ್ರದಲ್ಲೇ ಫುಡ್ ಸ್ಟ್ರೀಟ್ ಆರಂಭ

ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಬಳಿ ಶೀಘ್ರದಲ್ಲೇ ಫುಡ್ ಸ್ಟ್ರೀಟ್ ಆರಂಭ

Tumkur News: ತುಮಕೂರು ನಗರದ ಎಂ.ಜಿ. ರಸ್ತೆ ಮತ್ತು ವಿವೇಕಾನಂದ ರಸ್ತೆಯ ಫುಟ್‌ಪಾತ್‌ನಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳಿಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಮುಂಭಾಗದ ರಸ್ತೆಯ ಫುಟ್‌ಪಾತ್‌ನಲ್ಲಿ ವ್ಯವಸ್ಥೆ ಮಾಡಿಕೊಡಲಾಗಿದ್ದು, ಇದು ಅವರ ಜೀವನೋಪಾಯಕ್ಕೆ ಮಹಾನಗರ ಪಾಲಿಕೆ ನೀಡಿದ ಸಹಕಾರ ಎಂದು ಮಹಾನಗರ ಪಾಲಿಕೆ ಆಯುಕ್ತೆ ಶುಭ ತಿಳಿಸಿದ್ದಾರೆ.

Tumkur News: ತುಮಕೂರಿನಲ್ಲಿ ಧ್ವಜ ಪೂಜೆಯೊಂದಿಗೆ ಹಿಂದೂ ಮಹಾ ಗಣಪತಿ ಮಹೋತ್ಸವಕ್ಕೆ ಚಾಲನೆ

ಧ್ವಜ ಪೂಜೆಯೊಂದಿಗೆ ಹಿಂದೂ ಮಹಾ ಗಣಪತಿ ಮಹೋತ್ಸವಕ್ಕೆ ಚಾಲನೆ

Tumkur News: ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳದ ವತಿಯಿಂದ ಈ ವರ್ಷದ ಹಿಂದೂ ಮಹಾ ಗಣಪತಿ ಮಹೋತ್ಸವದ ಅಂಗವಾಗಿ ನಗರದ ಬಿ.ಎಚ್. ರಸ್ತೆಯ ಸೋಮೆಕಟ್ಟೆ ಮಠದ ಬಳಿ ಸಂಪ್ರದಾಯಬದ್ಧವಾಗಿ ಗೋ ಪೂಜೆ ಮತ್ತು ಧ್ವಜ ಪೂಜೆ ನೆರವೇರಿಸುವ ಮೂಲಕ ಗಣೇಶೋತ್ಸವ ಕಾರ್ಯಕ್ರಮಗಳಿಗೆ ಅಧಿಕೃತ ಚಾಲನೆ ನೀಡಲಾಯಿತು.

Tumkur News: ಧರ್ಮಸ್ಥಳ ಯೋಜನೆ ವತಿಯಿಂದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

ಧರ್ಮಸ್ಥಳ ಯೋಜನೆ ವತಿಯಿಂದ ಸಾಮಾಜಿಕ ಅರಣ್ಯೀಕರಣ

SKDRDP Tumkur: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಮಲ್ಲಸಂದ್ರ ಡೈರಿ ಆವರಣದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ಜರುಗಿತು. ಈ ಕುರಿತ ವಿವರ ಇಲ್ಲಿದೆ.

Belagavi Blood Donation Camps: ನಾಳೆ ಬೆಳಗಾವಿ ಜಿಲ್ಲೆಯ 22 ಸ್ಥಳಗಳಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ; ಜಿಪಂನಿಂದ ಆಯೋಜನೆ

ನಾಳೆ ಬೆಳಗಾವಿ ಜಿಲ್ಲೆಯ 22 ಸ್ಥಳಗಳಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Belagavi News: ಶಿಕ್ಷಕರ ದಿನಾಚರಣೆ ಅಂಗವಾಗಿ ಸೆ.3 ರಂದು ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕುಗಳ ಒಟ್ಟು 22 ಸ್ಥಳಗಳಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ”ವನ್ನು ಆಯೋಜಿಸಲಾಗಿದೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

Tiptur News: ತಿಪಟೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ದಂಪತಿಗೆ ಗಾಯ

ತಿಪಟೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ದಂಪತಿಗೆ ಗಾಯ

Tiptur News: ಆಕಸ್ಮಿಕ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ದಂಪತಿಗೆ ಸುಟ್ಟ ಗಾಯಗಳಾಗಿರುವ ಘಟನೆ ತಿಪಟೂರು ತಾಲೂಕಿನ ಗೆದ್ಲಹಳ್ಳಿ ವ್ಯಾಪ್ತಿಯ ಕಾಯಿ ಫ್ಯಾಕ್ಟರಿ ಬಳಿಯ ಶೆಡ್‌ವೊಂದರಲ್ಲಿ ಬೆಳಗಿನಜಾವ ಜರುಗಿದೆ. ಈ ಕುರಿತ ವಿವರ ಇಲ್ಲಿದೆ.

Madhugiri News: ಬಂಡೆಯಿಂದ ಕೆಳಗೆ ಬಿದ್ದು ಮೂರು ವರ್ಷದ ಹೆಣ್ಣು ಕರಡಿಗೆ ಗಂಭೀರ ಗಾಯ

ಬಂಡೆಯಿಂದ ಕೆಳಗೆ ಬಿದ್ದು 3ವರ್ಷದ ಹೆಣ್ಣು ಕರಡಿಗೆ ಗಂಭೀರ ಗಾಯ

Madhugiri News: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ಬಿದರೆಕೆರೆ ಗ್ರಾಮದಲ್ಲಿ ಪರಸ್ಪರ ಕಾದಾಟ ನಡೆಸುತ್ತಿದ್ದ ಎರಡು ಕರಡಿಗಳು ಬಂಡೆಯಿಂದ ಕೆಳಗೆ ಬಿದ್ದ ಪರಿಣಾಮ, ಮೂರು ವರ್ಷದ ಹೆಣ್ಣು ಕರಡಿಯೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

Tiptur News: ಕೆಐಟಿಯಲ್ಲಿ ನ್ಯಾಷನಲ್ ಇನ್ನೋವೇಶನ್ ಹ್ಯಾಕಥಾನ್- 2026; ವಿಜೇತ ತಂಡಗಳಿಗೆ ಬಹುಮಾನ ವಿತರಣೆ

ಕೆಐಟಿಯಲ್ಲಿ ನ್ಯಾಷನಲ್ ಇನ್ನೋವೇಶನ್ ಹ್ಯಾಕಥಾನ್- 2026

Tiptur News: ತಿಪಟೂರಿನ ಕಲ್ಪತರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಕೆಐಟಿ) ವತಿಯಿಂದ KIT SPOC ಇನ್ನೋವೇಶನ್ - 2026 ನ್ಯಾಷನಲ್ ಇನ್ನೋವೇಶನ್ ಹ್ಯಾಕಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹ್ಯಾಕಥಾನ್‌ನಲ್ಲಿ ವಿಜೇತ ತಂಡಗಳಿಗೆ ನಗದು ಬಹುಮಾನಗಳನ್ನು ನೀಡಲಾಯಿತು.

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ತುಮಕೂರು ನಗರ ಶಾಖೆಯಲ್ಲಿ ಅಪಘಾತ ವಿಮಾ ಪರಿಹಾರ ವಿತರಣೆ

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಅಪಘಾತ ವಿಮಾ ಪರಿಹಾರ ವಿತರಣೆ

Tumkur News: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ತುಮಕೂರು ನಗರದ ಶಾಖೆಯಲ್ಲಿ 9ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Tumkur News: ಓದುವ ಸಂಸ್ಕೃತಿಯಿಂದ ವ್ಯಕ್ತಿತ್ವ ವಿಕಸನ: ವೀರೇಶಾನಂದ ಸ್ವಾಮೀಜಿ

ಓದುವ ಸಂಸ್ಕೃತಿಯಿಂದ ವ್ಯಕ್ತಿತ್ವ ವಿಕಸನ: ವೀರೇಶಾನಂದ ಸ್ವಾಮೀಜಿ

Tumkur News: ಪುಸ್ತಕ ಅಧ್ಯಯನವು ಜ್ಞಾನವನ್ನು ಬೆಳೆಸಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುತ್ತದೆ. ವಿದ್ಯಾರ್ಥಿಗಳು ಮತ್ತು ಯುವಜನರು ಆದರ್ಶ ನಡವಳಿಕೆ ಹಾಗೂ ಆಲೋಚನಾ ಸಾಮರ್ಥ್ಯಕ್ಕಾಗಿ ಅಧ್ಯಯನ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿ ಸ್ವಾಮೀಜಿ ಕರೆ ನೀಡಿದ್ದಾರೆ.

ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ ಪ್ರಕರಣ; ಅಂತ್ಯಕ್ರಿಯೆ ಮಾಡಿದವರಿಗೆ ಬೆದರಿಕೆ

ತುಮಕೂರಿನಲ್ಲಿ ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ ಪ್ರಕರಣ

Tumkur News: ತುಮಕೂರಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗಾಗಿ ಸಾಮಾಜಿಕ ಕಾರ್ಯಕರ್ತರು ಮಾನವೀಯತೆ ಮೆರೆದು ಮೃತದೇಹಗಳ ಅಂತ್ಯಕ್ರಿಯೆ ನೆರವೇರಿಸಿದ್ದರು. ಆದರೆ, ಅವರಿಗೆ ಈಗ ಬೆದರಿಕೆ ಕರೆಗಳು ಬರುತ್ತಿವೆ. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.

ರಾಮತೀರ್ಥ ಹೊಸಕೊಪ್ಪ ಮೀಸಲು ಅರಣ್ಯದಲ್ಲಿ ಚಿರತೆ ಸಾವು; ಗ್ರಾಮಸ್ಥರಲ್ಲಿ ಆತಂಕ

ರಾಮತೀರ್ಥ ಹೊಸಕೊಪ್ಪ ಮೀಸಲು ಅರಣ್ಯದಲ್ಲಿ ಚಿರತೆ ಸಾವು

Hanagal News: ಹಾನಗಲ್ ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮಕ್ಕೆ ಹೊಂದಿಕೊಂಡಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆ ಮೃತಪಟ್ಟಿರುವುದು ಕಂಡುಬಂದಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಹಾನಗಲ್ ವಲಯ ಅರಣ್ಯಾಧಿಕಾರಿಗಳು ಹಾಗೂ ಜಿಲ್ಲಾ ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ 50 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ: ಶ್ರೀ ಮಧುಸೂಧನ್ ಸಾಯಿ

ತುಮಕೂರು ಜಿಲ್ಲೆಯಲ್ಲಿ 50 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ

Sadguru Sri Madhusudan Sai: ಶಿರಾ ತಾಲೂಕಿನ ಗಾಣದ ಹುಣಸೆಯಲ್ಲಿರುವ ಸತ್ಯ ಸಾಯಿ ಕಾರುಣ್ಯನಿಕೇತನದ ಗುರುಕುಲದ ಶಿಕ್ಷಣವನ್ನು ಪಿಯುಸಿವರೆಗೆ ವಿಸ್ತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್‌ನ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂಧನ್ ಸಾಯಿ ತಿಳಿಸಿದ್ದಾರೆ.

ಪ.ಜಾತಿ, ಪ.ಪಂಗಡದ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಐಕ್ಯತಾ ಸಮಾವೇಶ: ಪಿ. ಚಿಕ್ಕರಂಗಪ್ಪ

ಎಸ್‌ಸಿ, ಎಸ್‌ಟಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಐಕ್ಯತಾ ಸಮಾವೇಶ

Madhugiri News: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನೌಕರರಿಗೆ ಸಂವಿಧಾನ ಬದ್ದವಾಗಿ ಕಾಲಕಾಲಕ್ಕೆ ದೊರಬೇಕಾದ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಐಕ್ಯತಾ ಸಮಾವೇಶಕ್ಕೆ ತೆರಳುತ್ತಿರುವುದಾಗಿ ತಾಲೂಕು ಎಸ್.ಸಿ-ಎಸ್.ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಪಿ. ಚಿಕ್ಕರಂಗಪ್ಪ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆ ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹ; ಡಿಸಿ ಕಚೇರಿ ಮುಂದೆ ರೈತರಿಂದ ರಸ್ತೆ ತಡೆ

ಕಲಬುರಗಿ ಜಿಲ್ಲೆ ಬರಪೀಡಿತ ಪ್ರದೇಶ ಘೋಷಣೆಗೆ ರೈತರ ಆಗ್ರಹ

Kalaburagi News: ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ 1,000 ಕೋಟಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು. ಪ್ರತಿ ಎಕರೆಗೆ 50 ಸಾವಿರ ಬರ ಪರಿಹಾರ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಬೇಕು ಅಥವಾ ಸಾಲ ಮರುಪಾವತಿಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಒತ್ತಾಯಿಸಿ, ಸಂಯುಕ್ತ ಹೋರಾಟ ಕರ್ನಾಟಕ (SKM) ನೇತೃತ್ವದಲ್ಲಿ ರೈತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Pavagada News: ಪಾವಗಡ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ

ಪಾವಗಡ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ

Pavagada News: ಪಾವಗಡ ಪಟ್ಟಣದಾದ್ಯಂತ ಬುಧವಾರ ಪ್ರವಾದಿ ಮುಹಮ್ಮದ್‌ ಅವರ ಜನ್ಮದಿನದ ಅಂಗವಾಗಿ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಈದ್ ಮಿಲಾದ್ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.

ಹಾವೇರಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ 24.34 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ

ಹಾವೇರಿಯಲ್ಲಿ ಮಳೆ ಕೊರತೆಯಿಂದ 24.34 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ

Haveri News: ಹಾವೇರಿ ಜಿಲ್ಲೆಯಲ್ಲಿ ಜೂನ್‌ 15, 16 ಮತ್ತು 17ರಂದು ಸುರಿದ ಮಳೆಯಿಂದ ರಾಣೇಬೆನ್ನೂರು, ರಟ್ಟಿಹಳ್ಳಿ, ಹಾನಗಲ್ ಹಾಗೂ ಹಾವೇರಿ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ 129 ರೈತರ 24.34 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಜಂಟಿ ಸಮೀಕ್ಷೆ ಬಳಿಕ 114 ರೈತರ 19.56 ಹೆಕ್ಟೇರ್ ಪ್ರದೇಶದ ಹಾನಿ ದೃಢಪಟ್ಟಿದೆ.

Yuva Samvada; ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ: ಡಿಸಿ ಶುಭ ಕಲ್ಯಾಣ್

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ: ಡಿಸಿ ಶುಭ ಕಲ್ಯಾಣ್

Tumkur News: ತುಮಕೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತುಮಕೂರು ವಿವಿ ಕಲಾ ಕಾಲೇಜು, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಪ್ರೆಸ್ ಕ್ಲಬ್ ವತಿಯಿಂದ ಜಿಲ್ಲಾಧಿಕಾರಿಗಳೊಂದಿಗೆ ಯುವ ಸಂವಾದ ಕಾರ್ಯಕ್ರಮವನ್ನು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉದ್ಘಾಟಿಸಿ, ಮಾತನಾಡಿದರು.

ಈ ಬಾರಿಯ ಗಣೇಶ ಚತುರ್ಥಿಗೆ ಪಿಓಪಿ ಗಣಪತಿ ಮೂರ್ತಿಗಳ ಬದಲು ಪರಿಸರ ಸ್ನೇಹಿ ಮಣ್ಣಿನ ಮೂರ್ತಿ ಪ್ರತಿಷ್ಠಾಪಿಸಿ

ಮಣ್ಣಿನ ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆಗೆ ಜಾಗೃತಿ ಮೂಡಲಿ

Ganesha Chaturthi 2026: ಈ ಬಾರಿಯ ಗಣೇಶ ಚತುರ್ಥಿಯಂದು ಮಣ್ಣಿನ ಗಣಪತಿಗೆ ಆದ್ಯತೆ ನೀಡುವ ಸಂಕಲ್ಪವನ್ನು ಸಾರ್ವಜನಿಕರು ಮಾಡಬೇಕಾಗಿದೆ. ಸರ್ಕಾರವೂ ಪಿಓಪಿ ಗಣಪತಿ ಮೂರ್ತಿಗಳ ನಿಯಂತ್ರಣಕ್ಕೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಉತ್ತೇಜನ ನೀಡಬೇಕಾಗಿದೆ.

ಒಂಬತ್ತು ತಿಂಗಳಲ್ಲಿ ಲೋಕಾಯುಕ್ತ ಕಚೇರಿ ಕಟ್ಟಡ ನಿರ್ಮಾಣ: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್

ಹಾವೇರಿಯಲ್ಲಿ ಲೋಕಾಯುಕ್ತ ಕಚೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

Haveri News: ಹಾವೇರಿ ಶಹರದ ಬಸವೇಶ್ವರ ನಗರದಲ್ಲಿ ಲೋಕಾಯುಕ್ತ ಕಚೇರಿ ಕಟ್ಟಡ ನಿರ್ಮಾಣಕ್ಕೆ ಸೋಮವಾರ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಭೂಮಿ ಪೂಜೆ ನೆರವೇರಿದರು. ಬಳಿಕ ಮಾತನಾಡಿದ ಅವರು, ಲೋಕಾಯುಕ್ತ ಕಚೇರಿಗಾಗಿ ಸರ್ಕಾರದಿಂದ ನಿವೇಶನ ಒದಗಿಸಲಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಸರ್ಕಾರದ ಆದೇಶ ಹಾಗೂ ಕಾರ್ಯಾದೇಶವೂ ಆಗಿದೆ. ಹೀಗಾಗಿ ಕಾಮಗಾರಿ ವಿಳಂಬವಾಗದಂತೆ ತಕ್ಷಣ ಆರಂಭಿಸುವ ಉದ್ದೇಶದಿಂದ ಅಡಿಗಲ್ಲು ಹಾಕಲಾಗಿದೆ ಎಂದು ಹೇಳಿದ್ದಾರೆ.

Tumkur News: ತುಮಕೂರಿನಿಂದ ಮಂತ್ರಾಲಯಕ್ಕೆ ಸಾರಿಗೆ ಬಸ್ ಹೆಚ್ಚಿಸಲು ಆಗ್ರಹ

ತುಮಕೂರಿನಿಂದ ಮಂತ್ರಾಲಯಕ್ಕೆ ಸಾರಿಗೆ ಬಸ್ ಹೆಚ್ಚಿಸಲು ಆಗ್ರಹ

Tumkur News: ತುಮಕೂರು ಜಿಲ್ಲೆಯಿಂದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಂತ್ರಾಲಯಕ್ಕೆ ಪ್ರತಿದಿನ ತೆರಳುವ ಭಕ್ತರ ಸಂಖ್ಯೆ ಅಪಾರವಾಗಿದೆ. ಆದರೆ, ಇದಕ್ಕೆ ತಕ್ಕಂತೆ ಸಾರಿಗೆ ಸೌಲಭ್ಯಗಳಿಲ್ಲದೆ ಭಕ್ತರು ಪರದಾಡುವಂತಾಗಿದ್ದು, ತುಮಕೂರು-ಮಂತ್ರಾಲಯ ಮಾರ್ಗದಲ್ಲಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂಬ ಆಗ್ರಹ ತೀವ್ರಗೊಂಡಿದೆ.

ಮಧುಗಿರಿಯಲ್ಲಿ ʼಮುಗಿಯದ ಪ್ರೇಮ ಕಥೆʼ ಕಿರುಚಿತ್ರ ರಿಲೀಸ್‌

ಮಧುಗಿರಿಯಲ್ಲಿ ʼಮುಗಿಯದ ಪ್ರೇಮ ಕಥೆʼ ಕಿರುಚಿತ್ರ ರಿಲೀಸ್‌

Madhugiri News: ಮಧುಗಿರಿ ತಾಲೂಕಿನ ಸ್ಥಳೀಯ ಕಲಾವಿದರು ವರಮಹಾಲಕ್ಷ್ಮಿ ಹಬ್ಬದ ದಿನವಾದ ಶುಕ್ರವಾರ ಐತಿಹಾಸಿಕ ಶ್ರೀ ದಂಡಿನ ಮಾರಮ್ಮ ದೇವಾಲಯದ ಆವರಣದಲ್ಲಿ 13 ನಿಮಿಷಗಳ ಕಾಲದ ಯೂಟ್ಯೂಬ್‌ನ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುವ ಕಿರುಚಿತ್ರ 'ಮುಗಿಯದ ಪ್ರೇಮ ಕಥೆ' ಬಿಡುಗಡೆಗೊಳಿಸಿದರು.

ಪ್ರೊ. ಶರದ್ ಜೋಶಿ ನೇತೃತ್ವದ ನೀರಾವರಿ ತಜ್ಞರ ತಂಡದಿಂದ ಆಲಮಟ್ಟಿ ಜಲಾಶಯದ ಸುರಕ್ಷತೆ ಪರಿಶೀಲನೆ

ನೀರಾವರಿ ತಜ್ಞರ ತಂಡದಿಂದ ಆಲಮಟ್ಟಿ ಜಲಾಶಯದ ಸುರಕ್ಷತೆ ಪರಿಶೀಲನೆ

Almatti Reservoir: ಪ್ರೊ. ಶರದ್ ಜೋಶಿ ನೇತೃತ್ವದ ಎಂಟು ಜನ ನೀರಾವರಿ ತಜ್ಞರ ತಂಡ ಬುಧವಾರ ಹಾಗೂ ಗುರುವಾರ ಎರಡು ದಿನಗಳ ಕಾಲ ಆಲಮಟ್ಟಿ ಜಲಾಶಯದ ಸಮಗ್ರ ಸುರಕ್ಷತಾ ಪರಿಶೀಲನೆ ನಡೆಸಿತು. ಈ ಕುರಿತ ವಿವರ ಇಲ್ಲಿದೆ.

ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಬಿ.ಸಿ. ನಾಗೇಶ್ ನಿಧನ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಬಿಎಸ್‌ವೈ

BC Nagesh: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅನೇಕ ರಾಜಕೀಯ ಮುಖಂಡರು, ಸಾರ್ವಜನಿಕರು ಹಿರಿಯ ರಾಜಕಾರಣಿ, ಬಿಜೆಪಿ ನಾಯಕ, ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

Loading...