ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಿಲ್ಲೆ

Pavagada News: ಪಾವಗಡ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ

ಪಾವಗಡ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ

Pavagada News: ಪಾವಗಡ ಪಟ್ಟಣದಾದ್ಯಂತ ಬುಧವಾರ ಪ್ರವಾದಿ ಮುಹಮ್ಮದ್‌ ಅವರ ಜನ್ಮದಿನದ ಅಂಗವಾಗಿ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಈದ್ ಮಿಲಾದ್ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.

ಹಾವೇರಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ 24.34 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ

ಹಾವೇರಿಯಲ್ಲಿ ಮಳೆ ಕೊರತೆಯಿಂದ 24.34 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ

Haveri News: ಹಾವೇರಿ ಜಿಲ್ಲೆಯಲ್ಲಿ ಜೂನ್‌ 15, 16 ಮತ್ತು 17ರಂದು ಸುರಿದ ಮಳೆಯಿಂದ ರಾಣೇಬೆನ್ನೂರು, ರಟ್ಟಿಹಳ್ಳಿ, ಹಾನಗಲ್ ಹಾಗೂ ಹಾವೇರಿ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ 129 ರೈತರ 24.34 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಜಂಟಿ ಸಮೀಕ್ಷೆ ಬಳಿಕ 114 ರೈತರ 19.56 ಹೆಕ್ಟೇರ್ ಪ್ರದೇಶದ ಹಾನಿ ದೃಢಪಟ್ಟಿದೆ.

Yuva Samvada; ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ: ಡಿಸಿ ಶುಭ ಕಲ್ಯಾಣ್

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ: ಡಿಸಿ ಶುಭ ಕಲ್ಯಾಣ್

Tumkur News: ತುಮಕೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತುಮಕೂರು ವಿವಿ ಕಲಾ ಕಾಲೇಜು, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಪ್ರೆಸ್ ಕ್ಲಬ್ ವತಿಯಿಂದ ಜಿಲ್ಲಾಧಿಕಾರಿಗಳೊಂದಿಗೆ ಯುವ ಸಂವಾದ ಕಾರ್ಯಕ್ರಮವನ್ನು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉದ್ಘಾಟಿಸಿ, ಮಾತನಾಡಿದರು.

ಈ ಬಾರಿಯ ಗಣೇಶ ಚತುರ್ಥಿಗೆ ಪಿಓಪಿ ಗಣಪತಿ ಮೂರ್ತಿಗಳ ಬದಲು ಪರಿಸರ ಸ್ನೇಹಿ ಮಣ್ಣಿನ ಮೂರ್ತಿ ಪ್ರತಿಷ್ಠಾಪಿಸಿ

ಮಣ್ಣಿನ ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆಗೆ ಜಾಗೃತಿ ಮೂಡಲಿ

Ganesha Chaturthi 2026: ಈ ಬಾರಿಯ ಗಣೇಶ ಚತುರ್ಥಿಯಂದು ಮಣ್ಣಿನ ಗಣಪತಿಗೆ ಆದ್ಯತೆ ನೀಡುವ ಸಂಕಲ್ಪವನ್ನು ಸಾರ್ವಜನಿಕರು ಮಾಡಬೇಕಾಗಿದೆ. ಸರ್ಕಾರವೂ ಪಿಓಪಿ ಗಣಪತಿ ಮೂರ್ತಿಗಳ ನಿಯಂತ್ರಣಕ್ಕೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಉತ್ತೇಜನ ನೀಡಬೇಕಾಗಿದೆ.

ಒಂಬತ್ತು ತಿಂಗಳಲ್ಲಿ ಲೋಕಾಯುಕ್ತ ಕಚೇರಿ ಕಟ್ಟಡ ನಿರ್ಮಾಣ: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್

ಹಾವೇರಿಯಲ್ಲಿ ಲೋಕಾಯುಕ್ತ ಕಚೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

Haveri News: ಹಾವೇರಿ ಶಹರದ ಬಸವೇಶ್ವರ ನಗರದಲ್ಲಿ ಲೋಕಾಯುಕ್ತ ಕಚೇರಿ ಕಟ್ಟಡ ನಿರ್ಮಾಣಕ್ಕೆ ಸೋಮವಾರ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಭೂಮಿ ಪೂಜೆ ನೆರವೇರಿದರು. ಬಳಿಕ ಮಾತನಾಡಿದ ಅವರು, ಲೋಕಾಯುಕ್ತ ಕಚೇರಿಗಾಗಿ ಸರ್ಕಾರದಿಂದ ನಿವೇಶನ ಒದಗಿಸಲಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಸರ್ಕಾರದ ಆದೇಶ ಹಾಗೂ ಕಾರ್ಯಾದೇಶವೂ ಆಗಿದೆ. ಹೀಗಾಗಿ ಕಾಮಗಾರಿ ವಿಳಂಬವಾಗದಂತೆ ತಕ್ಷಣ ಆರಂಭಿಸುವ ಉದ್ದೇಶದಿಂದ ಅಡಿಗಲ್ಲು ಹಾಕಲಾಗಿದೆ ಎಂದು ಹೇಳಿದ್ದಾರೆ.

Tumkur News: ತುಮಕೂರಿನಿಂದ ಮಂತ್ರಾಲಯಕ್ಕೆ ಸಾರಿಗೆ ಬಸ್ ಹೆಚ್ಚಿಸಲು ಆಗ್ರಹ

ತುಮಕೂರಿನಿಂದ ಮಂತ್ರಾಲಯಕ್ಕೆ ಸಾರಿಗೆ ಬಸ್ ಹೆಚ್ಚಿಸಲು ಆಗ್ರಹ

Tumkur News: ತುಮಕೂರು ಜಿಲ್ಲೆಯಿಂದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಂತ್ರಾಲಯಕ್ಕೆ ಪ್ರತಿದಿನ ತೆರಳುವ ಭಕ್ತರ ಸಂಖ್ಯೆ ಅಪಾರವಾಗಿದೆ. ಆದರೆ, ಇದಕ್ಕೆ ತಕ್ಕಂತೆ ಸಾರಿಗೆ ಸೌಲಭ್ಯಗಳಿಲ್ಲದೆ ಭಕ್ತರು ಪರದಾಡುವಂತಾಗಿದ್ದು, ತುಮಕೂರು-ಮಂತ್ರಾಲಯ ಮಾರ್ಗದಲ್ಲಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂಬ ಆಗ್ರಹ ತೀವ್ರಗೊಂಡಿದೆ.

ಮಧುಗಿರಿಯಲ್ಲಿ ʼಮುಗಿಯದ ಪ್ರೇಮ ಕಥೆʼ ಕಿರುಚಿತ್ರ ರಿಲೀಸ್‌

ಮಧುಗಿರಿಯಲ್ಲಿ ʼಮುಗಿಯದ ಪ್ರೇಮ ಕಥೆʼ ಕಿರುಚಿತ್ರ ರಿಲೀಸ್‌

Madhugiri News: ಮಧುಗಿರಿ ತಾಲೂಕಿನ ಸ್ಥಳೀಯ ಕಲಾವಿದರು ವರಮಹಾಲಕ್ಷ್ಮಿ ಹಬ್ಬದ ದಿನವಾದ ಶುಕ್ರವಾರ ಐತಿಹಾಸಿಕ ಶ್ರೀ ದಂಡಿನ ಮಾರಮ್ಮ ದೇವಾಲಯದ ಆವರಣದಲ್ಲಿ 13 ನಿಮಿಷಗಳ ಕಾಲದ ಯೂಟ್ಯೂಬ್‌ನ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುವ ಕಿರುಚಿತ್ರ 'ಮುಗಿಯದ ಪ್ರೇಮ ಕಥೆ' ಬಿಡುಗಡೆಗೊಳಿಸಿದರು.

ಪ್ರೊ. ಶರದ್ ಜೋಶಿ ನೇತೃತ್ವದ ನೀರಾವರಿ ತಜ್ಞರ ತಂಡದಿಂದ ಆಲಮಟ್ಟಿ ಜಲಾಶಯದ ಸುರಕ್ಷತೆ ಪರಿಶೀಲನೆ

ನೀರಾವರಿ ತಜ್ಞರ ತಂಡದಿಂದ ಆಲಮಟ್ಟಿ ಜಲಾಶಯದ ಸುರಕ್ಷತೆ ಪರಿಶೀಲನೆ

Almatti Reservoir: ಪ್ರೊ. ಶರದ್ ಜೋಶಿ ನೇತೃತ್ವದ ಎಂಟು ಜನ ನೀರಾವರಿ ತಜ್ಞರ ತಂಡ ಬುಧವಾರ ಹಾಗೂ ಗುರುವಾರ ಎರಡು ದಿನಗಳ ಕಾಲ ಆಲಮಟ್ಟಿ ಜಲಾಶಯದ ಸಮಗ್ರ ಸುರಕ್ಷತಾ ಪರಿಶೀಲನೆ ನಡೆಸಿತು. ಈ ಕುರಿತ ವಿವರ ಇಲ್ಲಿದೆ.

ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಬಿ.ಸಿ. ನಾಗೇಶ್ ನಿಧನ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಬಿಎಸ್‌ವೈ

BC Nagesh: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅನೇಕ ರಾಜಕೀಯ ಮುಖಂಡರು, ಸಾರ್ವಜನಿಕರು ಹಿರಿಯ ರಾಜಕಾರಣಿ, ಬಿಜೆಪಿ ನಾಯಕ, ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಕಲಬುರಗಿಯಲ್ಲಿ ಮತ್ತೊಂದು ಎಡವಟ್ಟು; ಕಂಡಕ್ಟರ್ ಬದಲು ಟಿಕೆಟ್ ವಿತರಿಸಿದ ವಿದ್ಯಾರ್ಥಿ! ಕೆಕೆಆರ್‌ಟಿಸಿ ಬಸ್‌ನ ದೃಶ್ಯ ಮೊಬೈಲ್‌ನಲ್ಲಿ ಸೆರೆ

ಕಂಡಕ್ಟರ್ ಬದಲು ವಿದ್ಯಾರ್ಥಿಯಿಂದ ಟಿಕೆಟ್ ವಿತರಣೆ

Kalaburagi News: ಕಲಬುರಗಿ ಸಿಟಿ ಬಸ್ ನಿಲ್ದಾಣದಿಂದ ಕಾಳಗಿಗೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಪ್ರಯಾಣಿಕರಿಗೆ ಟಿಕೆಟ್ ವಿತರಿಸುತ್ತಿರುವ ದೃಶ್ಯ ಪ್ರಯಾಣಿಕರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಸ್ ಕಾಳಗಿ ತಾಲೂಕಿನ ಡಿಪೋಗೆ ಸೇರಿದ್ದು ಎಂದು ತಿಳಿದುಬಂದಿದೆ.

ಹಾವೇರಿ ಜಿಲ್ಲೆಯಾದ್ಯಂತ ಶೇಕಡಾ 43ರಷ್ಟು ಮಳೆ ಕೊರತೆ; 2,058 ಕೆರೆಗಳಲ್ಲಿ 14 ಮಾತ್ರ ಭರ್ತಿ: ಕಂಗಾಲಾದ ರೈತರು

ಹಾವೇರಿ ಜಿಲ್ಲೆಯಾದ್ಯಂತ ಶೇಕಡಾ 43ರಷ್ಟು ಮಳೆ ಕೊರತೆ

Haveri News: ಹಾವೇರಿ ಜಿಲ್ಲೆಯಾದ್ಯಂತ ವಾಡಿಕೆಗಿಂತ ಶೇ. 43.15ರಷ್ಟು ಮಳೆ ಕೊರತೆ ದಾಖಲಾಗಿರುವುದು ಬರದ ಛಾಯೆ ಮತ್ತಷ್ಟು ಗಾಢವಾಗುವ ಮುನ್ಸೂಚನೆ ನೀಡಿದೆ. ಜಿಲ್ಲೆಯ 2,058 ಕೆರೆಗಳ ಪೈಕಿ ಕೇವಲ 14 ಕೆರೆಗಳು ಮಾತ್ರ ಸಂಪೂರ್ಣ ಭರ್ತಿಯಾಗಿದ್ದು, ಬಹುತೇಕ ಕೆರೆಗಳು ನೀರಿನ ಕೊರತೆಯಿಂದ ಬಳಲುತ್ತಿವೆ.

ಕನಿಷ್ಠ ವೇತನ, ಸೇವಾ ಭದ್ರತೆಗೆ ಆಗ್ರಹ; ತುಮಕೂರಿನಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಸೇವಾ ಭದ್ರತೆಗೆ ಆಗ್ರಹಿಸಿ ತುಮಕೂರಿನಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

Tumkur News: ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಕನಿಷ್ಠ ವೇತನ ಜಾರಿಗೊಳಿಸಬೇಕು ಹಾಗೂ ಸೇವಾ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬೆಳಗಾವಿ ಜಿಲ್ಲೆಯ ಎಲ್ಲ ಹೆಣ್ಣುಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಪರಿಶೀಲನೆ: ಶ್ರೀ ಮಧುಸೂದನ ಸಾಯಿ

ಬೆಳಗಾವಿ ಜಿಲ್ಲೆಯ ಎಲ್ಲ ಹೆಣ್ಣುಮಕ್ಕಳಿಗೆ ಪೌಷ್ಟಿಕ ಆಹಾರ: ಮಧುಸೂದನ ಸಾಯಿ

Sadguru Sri Madhusudan Sai: ಕೇವಲ ಗರ್ಭಿಣಿಯರಿಗಷ್ಟೇ ಪೌಷ್ಟಿಕಾಂಶದ ಪುಡಿಯನ್ನು ಕೊಟ್ಟರೆ ಹೆಚ್ಚು ಪ್ರಯೋಜನವಾಗುವುದಿಲ್ಲ. 13ನೇ ವಯಸ್ಸಿನಿಂದಲೇ ಬೆಳಗಾವಿ ಜಿಲ್ಲೆಯ ಎಲ್ಲ ಹೆಣ್ಣುಮಕ್ಕಳಿಗೆ ಈ ಸೂತ್ರಾಧಾರಿತ ಪುಡಿ ಸಿಗುವಂತೆ ಆಗಬೇಕು. ಆಗ ಅವರ ಇಡೀ ಜೀವನ ಚೆನ್ನಾಗಿರುತ್ತದೆ. ಆರೋಗ್ಯವಂತ ಮಹಿಳೆಯರು ಆರೋಗ್ಯವಂತ ಮಕ್ಕಳಿಗೆ ಜನ್ಮನೀಡುತ್ತಾರೆ. ಅರೋಗ್ಯವಂತ ಸಮಾಜ ರೂಪುಗೊಳ್ಳುತ್ತದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಿಸಿದ್ದಾರೆ.

Gelatin Blast at Kalaburagi: ಪತ್ನಿ ನಡತೆ ಬಗ್ಗೆ ಸಂಶಯ ಪಟ್ಟು ಮನೆಯಲ್ಲೇ ಜಿಲೆಟಿನ್ ಸ್ಫೋಟ; ತಂದೆ–ಮಗಳು ಬಲಿ, ನಾಲ್ವರಿಗೆ ಗಂಭೀರ ಗಾಯ!

ಪತ್ನಿ ನಡತೆ ಬಗ್ಗೆ ಸಂಶಯ; ಜಿಲೆಟಿನ್ ಸ್ಫೋಟಕ್ಕೆ ತಂದೆ–ಮಗಳು ಬಲಿ

Kalaburagi News: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ನಡತೆ ಬಗ್ಗೆ ಸಂಶಯಗೊಂಡ ವ್ಯಕ್ತಿಯೊಬ್ಬ ಮನೆಯಲ್ಲಿ ಜಿಲೆಟಿನ್ ಕಡ್ಡಿಗಳನ್ನು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ 15 ವರ್ಷದ ಪುತ್ರಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಮಂಟಕಿ ತಾಂಡಾದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ಕನಿಷ್ಠ ವೇತನ ಪರಿಷ್ಕರಣೆ ಆದೇಶ ಜಾರಿಗೆ ಆಗ್ರಹ; ತುಮಕೂರು ಡಿಸಿ ಕಚೇರಿ ಎದುರು ಹೊರಗುತ್ತಿಗೆ ನೌಕರರ ಪ್ರತಿಭಟನೆ

ಕನಿಷ್ಠ ವೇತನ ಆದೇಶ ಜಾರಿಗೆ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ

Tumkur News: ಕನಿಷ್ಠ ವೇತನ ಪರಿಷ್ಕರಣೆ ಕುರಿತು ಹೊರಡಿಸಿರುವ ಆದೇಶವನ್ನು ಕೂಡಲೇ ದೃಢೀಕರಿಸಿ ಅಂತಿಮ ಅಧಿಸೂಚನೆ ಹೊರಡಿಸಬೇಕು ಹಾಗೂ ಪರಿಷ್ಕೃತ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸರ್ಕಾರದ ಹೊರಗುತ್ತಿಗೆ ನೌಕರರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

Tumkur News: ಸಂಗೀತ ವಿಶ್ವದ ಭಾಷೆ, ಅದಕ್ಕೆ ಮನಸ್ಸುಗಳನ್ನು ಬೆಸೆಯುವ ಶಕ್ತಿಯಿದೆ: ವೀರೇಶಾನಂದ ಸ್ವಾಮೀಜಿ

ಸಂಗೀತಕ್ಕೆ ಮನಸ್ಸುಗಳನ್ನು ಬೆಸೆಯುವ ಶಕ್ತಿಯಿದೆ: ವೀರೇಶಾನಂದ ಸ್ವಾಮೀಜಿ

Tumkur News: ಭಾರತೀಯ ಸಂಗೀತ ಪರಂಪರೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಇಂದಿನ ಕಲಾವಿದರು, ಗುರುಗಳು ಮತ್ತು ಸಂಗೀತ ಸಂಸ್ಥೆಗಳ ಮೇಲಿದೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಬರ, ಬೆಳೆ ಹಾನಿ ಕುರಿತು ಸಚಿವ ಸಂಪುಟ‌ ಸಭೆಯಲ್ಲಿ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ

ಬರ, ಬೆಳೆ ಹಾನಿ ಕುರಿತು ಸಚಿವ ಸಂಪುಟ‌ ಸಭೆಯಲ್ಲಿ ಚರ್ಚೆ: ಪ್ರಿಯಾಂಕ್ ಖರ್ಗೆ

Priyank Kharge: ರಾಜ್ಯದಲ್ಲಿನ ಬರದ ಸ್ಥಿತಿ ಕುರಿತು ಈಗಾಗಲೇ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಕೇಂದ್ರಕ್ಕೆ ಪತ್ರ ಬರೆದು ಮನವರಿಕೆ‌ ಮಾಡಿಕೊಟ್ಟಿದ್ದಾರೆ. ಕೇಂದ್ರದ ಕಠಿಣ ಎನ್.ಡಿ.ಆರ್.ಎಫ್ ನಿಯಮಾವಳಿಯಿಂದ ರೈತರಿಗೆ‌ ನ್ಯಾಯಯುತ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ, ಇದನ್ನು ಸರಳಿಕರಣ ಮಾಡುವಂತೆ ರಾಜ್ಯದ ಬೇಡಿಕೆ ಇದ್ದು, ಅದನ್ನು ಕೇಂದ್ರ ಸರ್ಕಾರ ಪುರಸ್ಕರಿಸಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಆ.10ರಂದು ಬರ ಪರಿಶೀಲನೆಗಾಗಿ ಮಧುಗಿರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ: ಎಂಎಲ್‌ಸಿ ಆರ್.ರಾಜೇಂದ್ರ ಮಾಹಿತಿ

ಆ.10ರಂದು ಬರ ಪರಿಶೀಲನೆಗಾಗಿ ಮಧುಗಿರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ

Madhugiri News: ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಆಗಸ್ಟ್ 10ರಂದು ಸೋಮವಾರ ಬರ ಪರಿಶೀಲನೆಗೆ ಮಧುಗಿರಿಗೆ ಆಗಮಿಸುತ್ತಿದ್ದಾರೆ ಎಂದು ತುಮಕೂರು ವಿಧಾನ ಪರಿಷತ್ತು ಸದಸ್ಯ ಆರ್. ರಾಜೇಂದ್ರ ರಾಜಣ್ಣ ಮಾಹಿತಿ ನೀಡಿದ್ದಾರೆ.

ಮಕ್ಕಳಿಗೆ ಬಾಲ್ಯದಿಂದಲೇ ಧಾರ್ಮಿಕ ಸಂಸ್ಕಾರ ಕಲಿಸಿ: ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

ಮಕ್ಕಳಿಗೆ ಬಾಲ್ಯದಿಂದಲೇ ಧಾರ್ಮಿಕ ಸಂಸ್ಕಾರ ಕಲಿಸಿ

Madhugiri News: ಮಧುಗಿರಿ ಪಟ್ಟಣದ ದೊಡ್ಡಪೇಟೆಯಲ್ಲಿರುವ ಐತಿಹಾಸಿಕ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರದ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಶ್ರೀಕ್ಷೇತ್ರ ಸಿದ್ಧರಬೆಟ್ಟದ ಶ್ರೀ ರಂಭಾಪುರಿ ಖಾಸಾ ಶಾಖಾ ಮಠದ ಮಠಾಧ್ಯಕ್ಷರಾದ ಷ॥ ಬ್ರಹ್ಮ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿದರು.

Madhugiri News: ಮಧುಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ಎನ್. ರಾಜಣ್ಣ

ಮಧುಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ಎನ್. ರಾಜಣ್ಣ

Madhugiri News: ಮಧುಗಿರಿ ತಾಲೂಕಿನ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಮಾಜಿ ಸಚಿವರು ಹಾಗೂ ಶಾಸಕ ಕೆ.ಎನ್. ರಾಜಣ್ಣ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದ್ದು, ಜನರ ಆಶೋತ್ತರಗಳಿಗೆ ಸ್ಪಂದಿಸುವ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪಾವಗಡದ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌; ದಾಖಲೆಗಳು ಬೆಂಕಿಗಾಹುತಿ

ಪಾವಗಡದ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌

Pavagada News: ಪಾವಗಡ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪವಿರುವ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಚೇರಿಯಲ್ಲಿದ್ದ ಕೆಲವು ದಾಖಲೆಗಳು ಹಾಗೂ ಕಡತಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.

ಹಾವೇರಿಯಲ್ಲಿ ವರುಣನ ಆರ್ಭಟ: ರೈತರ ಮುಖದಲ್ಲಿ ಮಂದಹಾಸ, ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ

ಹಾವೇರಿಯಲ್ಲಿ ವರುಣನ ಆರ್ಭಟ: ರೈತರ ಮುಖದಲ್ಲಿ ಮಂದಹಾಸ

Haveri News: ಹಾವೇರಿ ಜಿಲ್ಲೆಯ ರೈತರಿಗೆ ಶನಿವಾರ ಸುರಿದ ಧಾರಾಕಾರ ಮಳೆ ಹೊಸ ಆಶಾಕಿರಣ ಮೂಡಿಸಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನದ ವೇಳೆಗೆ ಸುರಿದ ಉತ್ತಮ ಮಳೆಯಿಂದ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳು ತಂಪಾದ ವಾತಾವರಣಕ್ಕೆ ಸಾಕ್ಷಿಯಾದವು.

ಮಧುಗಿರಿಯಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಶೇ.89 ಪ್ರಗತಿ

ಮಧುಗಿರಿಯಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಶೇ.89 ಪ್ರಗತಿ

Madhugiri News: ಅರ್ಹ ಮತದಾರರು ಮತಪಟ್ಟಿಯಿಂದ ಹೊರಗುಳಿಯಬಾರದು. ಆಸಕ್ತಿ ವಹಿಸಿ ಗಣತಿ ನಮೂನೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಇಲ್ಲಿಯವರೆಗೂ ಸಂಪರ್ಕಕ್ಕೆ ಸಿಗದವರನ್ನು ಕಂದಾಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಅವರನ್ನು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು‌‌ ಎಂದು‌ ಎಂದು ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಬಿಎಲ್‌ಒಗಳಿಗೆ ಸಲಹೆ ನೀಡಿದ್ದಾರೆ.

ಕಳ್ಳತನವಾಗಿದ್ದ ವಸ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಎಸ್ಪಿ ಯಶೋಧಾ ವಂಟಗೋಡಿ

ಹಾವೇರಿಯಲ್ಲಿ ಕಳ್ಳತನವಾಗಿದ್ದ ವಸ್ತುಗಳು ವಾರಸುದಾರರಿಗೆ ಹಸ್ತಾಂತರ

Haveri News: ಹಾವೇರಿ ಜಿಲ್ಲೆಯಲ್ಲಿ ದಾಖಲಾದ ವಿವಿಧ ಸ್ವತ್ತಿನ ಅಪರಾಧ ಪ್ರಕರಣಗಳಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ನಗದು ಹಣ, ಮೊಬೈಲ್ ಫೋನ್‌ಗಳು, ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳು ಹಾಗೂ ದ್ವಿಚಕ್ರ ವಾಹನಗಳನ್ನು ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವುಗಳ ನಿಜವಾದ ವಾರಸುದಾರರಿಗೆ ಗುರುವಾರ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ನಡೆದ ಪ್ರಾಪರ್ಟಿ ಪರೇಡ್ ಮೂಲಕ ಹಸ್ತಾಂತರಿಸಲಾಯಿತು.

Loading...