Saturday, 20th April 2024

ಬೇಲೆಕೇರಿಯಲ್ಲಿ ಅದಿರು ಪ್ರಕರಣ: ಮೂವರಿಗೆ ಜೆಎಂಎಫ್ಸಿ ನ್ಯಾಯಾಲಯದಿಂದ ಜಾಮೀನು

ಅಂಕೋಲಾ : 2009ರಲ್ಲಿ ತಾಲೂಕಿನ ಬೇಲೆಕೇರಿಯಲ್ಲಿ ಅದಿರು ಪ್ರಕರಣದ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆನಂದ್ ಸಿಂಗ್, ಶಾಸಕ ನಾಗೇಂದ್ರ  ಅವರಿಗೆ ಅಂಕೋಲಾ ಜೆಎಂಎಪ್ ಸಿ ನ್ಯಾಯಾಲಯದಲ್ಲಿ ಜಾಮೀನು ನೀಡಿದೆ.

ಬೇಲೆಕೇರಿಯಲ್ಲಿ 2009-10ರ ಅದಿರು ಪ್ರಕರಣಕ್ಕೆ ಆನಂದ ಸಿಂಗ್ ಅವರ ಮಾಲಿಕತ್ವದ ವೈಷ್ಣವಿ ಮಿನರಲ್ಸ್ ಸೇರಿದಂತೆ ಹಲವು ಅದಿರು ಕಂಪನಿಗಳು ಭಾರೀ ಪ್ರಮಾಣದಲ್ಲಿ ಅದಿರು ಸಾಗಿಸಿದ್ದಾರೆ ಎಂಬ ಆರೋಪದ ಮೇಲೆ ಸಿ.ಬಿ.ಐ ತನಿಖೆ ನಡೆಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸಿ.ಬಿ.ಐ ತಂಡ  ಅಂದು ಶಾಸಕರಾಗಿದ್ದ ಆನಂದ್ ಸಿಂಗ್ , ಜನಾರ್ಧನ ರೆಡ್ಡಿ, ನಾಗೇಂದ್ರ ಸೇರಿದಂತೆ ಅವರ ಅದಿರು ಉದ್ಯಮಕ್ಕೆ ಸಂಬಂದಿಸಿದಂತೆ  ಚೆನ್ನೈ  ಸಿ.ಬಿ.ಐ ತಂಡದಿಂದ ಪ್ರಕರಣ ದಾಖಲಾಗಿತ್ತು. ಬಳಿಕ ಚೆನ್ನೈ ನಲ್ಲಿ ವಿಚಾರಣೆ ನಡೆಸಲಾಗಿದ್ದು ಅದು ಬೇಲೆಕೇರಿಯಲ್ಲಿ ನಡೆದ ಪ್ರಕರಣ ಆಗಿದ್ದರಿಂದ ಅಂಕೋಲಾ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ ಮಾಡಲಾಗಿತ್ತು.

ಸೋಮವಾರ ಅವರು ಅಂಕೋಲಾಕ್ಕೆ ಆಗಮಿಸಿ ನ್ಯಾಯಾಲಯದ ಎದುರು ಹಾಜರಾಗಿ ಜಾಮೀನು ಕೋರಿದ್ದು 11 ಜನರಲ್ಲಿ 7 ಜನರಿಗೆ ಅಂಕೋಲಾ ಜೆ.ಎಂ.ಎಫ್. ಸಿ ನ್ಯಾಯಾ ಲಯ ಜಾಮೀನು ನೀಡಿದೆ.

ಹಿರಿಯ ನ್ಯಾಯವಾದಿ ನಾಗರಾಜ ನಾಯಕ ಮತ್ತು ವಿನೋದ ಶ್ಯಾನಭಾಗ ಆರೋಪಿಗಳ ಪರ ಜಾಮೀನು ಕೋರಿ ಅರ್ಜಿ ಸಲ್ಲಿಸಿ ದ್ದರು.

error: Content is protected !!