ಸಿಂಧನೂರು: ತಾಲೂಕಿನಲ್ಲಿ ಮೊದಲ ದಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 28 ಜನ ವಿದ್ಯಾರ್ಥಿಗಳು ಗೈರುಹಾಜರಾಗಿರುವುದು ಕಂಡು ಬಂದಿದೆ.
ಒಟ್ಟು 35 ಪರೀಕ್ಷಾ ಕೇಂದ್ರಗಳು ಇದ್ದು ಇದರಲ್ಲಿ ವಿದ್ಯಾರ್ಥಿಗಳ ಸಂಖ್ಯೆ ತಾಲೂಕಿನಾದ್ಯಂತ 5686 ವಿದ್ಯಾರ್ಥಿಗಳು ಪರೀಕ್ಷೆ ಪರೀಕ್ಷೆ ಬರೆಯಬೇಕಿತ್ತು. ಇದರಲ್ಲಿ 28 ವಿದ್ಯಾರ್ಥಿಗಳು ಗೈರು ಹಾಜರಿ ಆಗಿರುವುದರಿಂದ 5658 ವಿದ್ಯಾರ್ಥಿಗಳು ಮೊದಲ ದಿನ ಪರೀಕ್ಷೆ ಯಶಸ್ವಿಯಾಗಿ ಪೂರೈಸಿದ್ದಾರೆ.
ವಿದ್ಯಾರ್ಥಿಗಳಿಗೆ ಸೌಲಭ್ಯ ಯಾವುದೇ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ತೊಂದರೆ ಆಗಬಾರದು ಎಂಬ ಉದ್ದೇಶದಿಂದ ತಾಲ್ಲೂಕು ಆಡಳಿತ ಹಾಗೂ ಕ್ಷೇತ್ರ ಶಿಕ್ಷಣ ಇಲಾಖೆ ವತಿಯಿಂದ ಕರೋನಾ ಜಾಗೃತಿ ಅಭಿಯಾನ ಹಾಗೂ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ಸಿನ ಸೌಲಭ್ಯ ಇನ್ನಿತರ ಅನೇಕ ಮೂಲಭೂತ ಸೌಲಭ್ಯಗಳನ್ನು ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ಅಧಿಕಾರಿಗಳಿಂದ ಮಾಡಿರುವುದು ಶ್ಲಾಘನೀಯವಾಗಿದೆ ಎಂದು ತಿಳಿದು ಬಂದಿದೆ.
ಶಾಂತಿಯುತವಾಗಿ ಸರ್ಕಾರ ಆದೇಶದ ಪ್ರಕಾರ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಮೊದಲ ದಿನ ಯಶಸ್ವಿಯಾಗಿ ನಡೆಸಿದ್ದಾವೆ ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಶರಣಪ್ಪ ವಟಗಲ್ ತಿಳಿಸಿದ್ದಾರೆ.