Thursday, 19th September 2024

ಕಬ್ಬು ತುಂಬಿದ್ದ ಲಾರಿ ಬಿದ್ದು ಇಬ್ಬರ ಸಾವು

ಚಾಮರಾಜನಗರ: ನಗರದ ಡಿವಿಯೇಷನ್ ರಸ್ತೆಯಲ್ಲಿ ಪಾದಚಾರಿಗಳ ಮೇಲೆ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಲಾರಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಕಬ್ಬಿನ ಲಾರಿ ಬಣ್ಣಾರಿ ಸಕ್ಕರೆ ಕಾರ್ಖಾನೆಗೆ ತೆರಳುತ್ತಿತ್ತು.

ಡಿವಿಯೇಷನ್ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಾದಚಾರಿಗಳ ಮೇಲೆ ಪಲ್ಟಿಯಾಗಿದೆ.

ಕಬ್ಬುಗಳ ಅಡಿಯಲ್ಲಿ ಮೃತದೇಹ ಸಿಲುಕಿಕೊಂಡಿದ್ದು, ಸಂಚಾರಿ ಪೊಲೀಸರು ಕ್ರೇನ್ ಸಹಾಯದಿಂದ ಮೃತದೇಹ ಹೊರ ತೆಗೆದಿದ್ದಾರೆ. ಮೃತರನ್ನು ಉತ್ತರ ಪ್ರದೇಶ ಮೂಲದ ಅತುಲ್ ಹಾಗೂ ಮಯೂರ್ ಎಂದು ಗುರುತಿಸಲಾಗಿದೆ.