Sunday, 19th May 2024

ಭೀಮಸಂದ್ರ ರಸ್ತೆ ಬದಿಯಲ್ಲಿ ಕಸ: ಗಮನಹರಿಸಲು ನಟ ಅನಿರುದ್ದ್ ಟ್ವೀಟ್ ಮಾಡಿ ಮನವಿ

ತುಮಕೂರು: ರಸ್ತೆ ಬದಿಯಲ್ಲಿ ಬಿದ್ದಿರುವ ಕಸದ ಬಗ್ಗೆ ಜನಪ್ರತಿನಿಧಿಗಳು ಗಮನ ಹರಿಸಿ ಎಂದು ನಟ ಅನಿರುದ್ದ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ತುಮಕೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಭೀಮ ಸಂದ್ರದ ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿರುವ ಕಸದ ರಾಶಿಯ ಪೋಟೋ ತೆಗೆದು ಜಾಲತಾಣದಲ್ಲಿ ಹರಿಬಿಟ್ಟು, ಕಸವನ್ನು ತೆರವು ಗೊಳಿಸಲು ಸ್ಥಳೀಯರು, ಜನಪ್ರತಿನಿಧಿಗಳು ಗಮನಹರಿಸು ವಂತೆ ಕೋರಿದ್ದಾರೆ.

ಸ್ವಚ್ಛತೆಯಲ್ಲಿ ತುಮಕೂರು 2ನೇ ಸ್ಥಾನ ಪಡೆದಿದೆ ಎಂದು ಪಾಲಿಕೆ ಅಧಿಕಾರಿಗಳು ಹೆಮ್ಮೆಯಿಂದ ಹೇಳಿದ್ದಾರೆ.

ಆದರೆ ನಟ ಅನಿರುದ್ದ್ ಅವರು ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಭೀಮ ಸಂದ್ರದಲ್ಲಿನ ಕಸದ ರಾಶಿಯ ಬಗ್ಗೆ ಟ್ವೀಟ್ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕಾಗಿದೆ.

 

Leave a Reply

Your email address will not be published. Required fields are marked *

error: Content is protected !!