ಮೇಘಸ್ಫೋಟದ ಹಿನ್ನೆಲೆಯಲ್ಲಿ ಯಾತ್ರೆ ರದ್ದುಗೊಂಡಿದ್ದು ಸೋಮವಾರ ಶಿವಮೊಗ್ಗಕ್ಕೆ ವಾಪಸಾಗಲಿದ್ದಾರೆ.
ಕಳೆದ ಜು.4ರಂದು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿದ್ದ ಮಹಿಳೆಯರು ಬೆಂಗಳೂರಿ ನಿಂದ ವೈಷ್ಣೋದೇವಿ ದರ್ಶನ ಪಡೆದು, ಬಳಿಕ ಅಮರನಾಥ ದರ್ಶನಕ್ಕೆ ಹೋಗಿದ್ದಾರೆ. ಮಾಜಿ ಮೇಯರ್ ಸುರೇಖಾ ಮುರಳೀಧರ್ ಸೇರಿದಂತೆ 16 ಮಂದಿ ಮಹಿಳೆಯರು ಯಾತ್ರೆಗೆ ಹೋಗಿದ್ದಾರೆ. ಪ್ರಸ್ತುತ ಅಮರನಾಥ ಸಮೀಪದ ಪಹಲ್ಗಾಮ್ ಬೇಸ್ ಕ್ಯಾಂಪ್ನಲ್ಲಿ ಇದ್ದಾರೆ.
ಪೂರ್ವ ನಿಗದಿಯಂತೆ ಅಮರನಾಥ ದರ್ಶನಕ್ಕೆ ಈ ತಂಡ ಹೋಗಬೇಕಿತ್ತು. ಜು.5ರಂದು ಪ್ರತಿಕೂಲ ಹವಾಮಾನ ಹಿನ್ನೆಲೆ ಅಮರನಾಥ ದರ್ಶನ ಮುಂದೂಡಲ್ಪಟ್ಟಿತ್ತು. ಇದೀಗ ಅಮರನಾಥ ಯಾತ್ರೆಯನ್ನೇ ರದ್ದುಗೊಳಿಸಿ, ವಾಪಸ್ ಹೊರಟಿದ್ದಾರೆ.