ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Avarekai Mela: ಡಿ.27 ರಿಂದ ನ್ಯಾಷನಲ್ ಮೈದಾನದಲ್ಲಿ ಅವರೇಕಾಯಿ ಮೇಳ ಪ್ರಾರಂಭ

Avarekai Mela: ಡಿ.27 ರಿಂದ ನ್ಯಾಷನಲ್ ಮೈದಾನದಲ್ಲಿ ಅವರೇಕಾಯಿ ಮೇಳ ಪ್ರಾರಂಭ

ಬೆಂಗಳೂರು; ಡಿಸೆಂಬರ್ 27ರಿಂದ ಜನವರಿ 5, 2025 ರ ಬೆಳಿಗ್ಗೆ 10 ರಿಂದ ರಾತ್ರಿ10ರ ವರೆಗೆ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಅವರೇಕಾಯಿ ಮೇಳ ನಡೆಯಲಿದೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟನೆ ಮಾಡುವರು, ತಿಪಟೂರು,, ಶ್ರೀ ಸೋಮೇಕಟ್ಟೆ ಕಾಡ ಸಿದ್ಧೇಶ್ವರ ಮಠದ ಪೀಠಾಧ್ಯಕ್ಷರಾದ ಶ್ರೀ ಮ.ನಿ.ಪ್ರ. ಡಾ. ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಮಹಾ ಸ್ವಾಮಿಗಳು ಮೇಳವನ್ನು 28 ಸಂಜೆ 6ಗೆ ದೀಪ ಬೆಳಗಿಸುವವರು ಎಂದು ಮಾಲೀಕರಾದ ಗೀತಾ ಶಿವಕುಮಾರ್ ತಿಳಿಸಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ತೇಜಸ್ವಿ ಸೂರ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ, ಶಾಸಕರಾದ ಉದಯ ಗರುಡಾಚಾರ್, ಹೆಚ್.ಸಿ ಬಾಲಕೃಷ್ಣ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಮೇಳದಲ್ಲಿ ಅವರೇಕಾಯಿಯಿಂದ ತಯಾರಾದ ಇಡ್ಲಿ. ದೋಸೆ, ಪಾಯಸ, ಚಕ್ಕುಲಿ, ನಿಪ್ಪಟ್ಟು, ಸಿಹಿ, ಖಾರಾ ಪದಾರ್ಥಗಳು ಸೇರಿದಂತೆ ಸುಮಾರು ನೂರು ಬಗೆಯ ತಿಂಡಿ, ತಿನಿಸುಗಳು, ರುಚಿಕಟ್ಟಾದ ಖಾದ್ಯಗಳು ಗ್ರಾಹಕರಿಗೆ ಲಭ್ಯವಾಗುತ್ತಿದೆ ಎಂದು ಸ್ವಾತಿ ವಿವರಿಸಿದರು
ಶುಚಿ, ರುಚಿಗೆ ಅತ್ಯುತ್ತಮ ಗುಣಮಟ್ಟ ಮತ್ತು ತಾಜಾ ತಿಂಡಿ ತಿನಿಸುಗಳಿಗೇ ಹೆಸರು ವಾಸಿಯಾದ ವಾಸವಿ ಕಾಂಡಿಮೆಂಟ್ಸ್ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ ವಿನೂತನವಾದ ಸಾಹಸ- ಪ್ರಯೋಗವನ್ನು ಮಾಡುತ್ತಿದೆ
ಮಾಗಡಿ ತಾಲೂಕಿನಲ್ಲಿ ರೈತರು ಬೆಳೆದ ಅವರೇಕಾಯಿಯನ್ನು 'ವಾಸವಿ ಕಾಂಡಿಮೆಂಟ್ಸ್' ನೇರವಾಗಿ ಖರೀದಿಸುತ್ತದೆ. ಇಲ್ಲಿ ಯಾವುದೇ ಮಧ್ಯವರ್ತಿಗಳ ಪ್ರವೇಶವಿಲ್ಲದೇ, ನೇರವಾಗಿ ಬೆಳೆಗಾರರ ಮನೆಬಾಗಿಲಿಗೇ ಹೋಗಿ ಅವರೇಕಾಯಿ ಖರೀದಿಸುವುದರಿಂದ ರೈತರಿಗೆ ಮಾರುಕಟ್ಟೆಯಲ್ಲಿ ಸಿಗುವ ಲಾಭಕ್ಕಿಂತ ಹೆಚ್ಚು ಮೊತ್ತ ಕೈಸೇರುತ್ತದೆ. ಎಂದರು