ಶಿವಮೊಗ್ಗ: ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನಲೆಯಲ್ಲಿ ಸಾಗರ ತಾಲೂಕಿನಲ್ಲಿ ಇಂದು ಸ್ವಯಂ ಪ್ರೇರಿತ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬಂದ್ ಕರೆ ನೀಡಿದೆ.
ಕರ್ನಾಟಕ ರಕ್ಷಣಾ ವೇದಿಕೆಯ ಸಾಗರ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆಯವರು, ಆತ್ಮೀಯರೇ ಕರ್ನಾಟಕದ ಜನಪ್ರಿಯ ಮೇರು ನಟ ಯುವಕರ ಕಣ್ಮಣಿ ಅಭಿಮಾನಿಗಳ ಆರಾಧ್ಯ ಪವರ್ ಸ್ಟಾರ್ ಪುನೀತ್ ರಾಜಕುಮಾರ ರವರು ನಮ್ಮನ್ನು ಅಗಲಿದ್ದಾರೆ. ಅವರ ನಿಧನ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದ್ದು ಮೃತರ ಗೌರವಾರ್ಥ ವಾಗಿ ಇಂದು ಸಾಗರ ತಾಲ್ಲೂಕನ್ನು ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸಲು ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.