Sunday, 19th May 2024

ಡಾ.ಬನ್ನಂಜೆ ಗೋವಿಂದಾಚಾರ್ಯರಿಗೆ ಪುತ್ರ ವಿಯೋಗ

ಉಡುಪಿ: ಹಿರಿಯ ವಿದ್ವಾಂಸ ಡಾ.ಬನ್ನಂಜೆ ಗೋವಿಂದಾಚಾರ್ಯರ ಕಿರಿಯ ಪುತ್ರ ವಿಜಯಭೂಷಣ ಆಚಾರ್ಯ (56 ವರ್ಷ) ಅವರು ಅಲ್ಪ ಅಸೌಖ್ಯದಿಂದ ಮಂಗಳವಾರ ರಾತ್ರಿ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ವಿಜಯಭೂಷಣ ಆಚಾರ್ಯ ಅವರು ತಂದೆ, ಸಹೋದರ ಸಹೋದರಿಯರನ್ನು ಅಗಲಿದ್ದಾರೆ. ಬುಧವಾರ ಬೆಳಿಗ್ಗೆ ಅಂಬಲ ಪಾಡಿಯ ಸ್ವಗೃಗಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ನಂತರ ಬೀಡಿನಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಯಿತು.

Leave a Reply

Your email address will not be published. Required fields are marked *

error: Content is protected !!