Sunday, 8th September 2024

ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ: ಮಾಜಿ ಉದ್ಯೋಗಿ ಬಂಧನ

ಬೆಂಗಳೂರು: ಬೆಳ್ಳಂದೂರಿನಲ್ಲಿರುವ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಂಪನಿಯ ಮಾಜಿ ಉದ್ಯೋಗಿ ನವನೀತ್ ಪ್ರಸಾದ್ ಬಂಧಿತ ಆರೋಪಿ. ಬೆಳ್ಳಂದೂರಿನ ಹೊರವರ್ತುಲ ರಸ್ತೆಯಲ್ಲಿರುವ ಖಾಸಗಿ ಕಂಪನಿಗೆ ಕರೆ ಮಾಡಿದ್ದ ಅನಾಮಿಕ ‘ಕಂಪನಿಯಲ್ಲಿ ಬಾಂಬ್ ಇಟ್ಟಿದ್ದು ಕೆಲ ಹೊತ್ತಿನಲ್ಲಿ ಬಾಂಬ್ ಸ್ಪೋಟಗೊಳ್ಳಲಿದೆ’ ಎಂದಿದ್ದ.

ಆತಂಕಗೊಂಡು ಕಾರ್ಯಪ್ರವೃತ್ತರಾದ ಕಂಪನಿ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ತಂಡ ದೌಡಾಯಿಸಿ ಮೂಲೆ – ಮೂಲೆಯಲ್ಲಿ ಜಾಲಾಡಿದ ನಂತರ ಅದೊಂದು ಹುಸಿ ಬಾಂಬ್ ಕರೆ ಎಂದು ಖಚಿತವಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಬೆಳ್ಳಂದೂರು ಪೊಲೀಸರು ಬಾಂಬ್ ಕರೆ ಬಂದ ಮೊಬೈಲ್ ನಂಬರ್ ಪರಿಶೀಲಿಸಿದಾಗ ಕಂಪನಿಯ ಮಾಜಿ ಉದ್ಯೋಗಿ ಯಾಗಿ ರುವ ನವನೀತ್ ಪ್ರಸಾದ್ ಕರೆ ಮಾಡಿರುವುದು ತಿಳಿದು ಬಂದಿತ್ತು.

error: Content is protected !!