ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ ಆರೋಪಿಗಳಾಗಿ, ಎಸ್ಐಟಿ ಅಧಿಕಾರಿಗಳ ತನಿಖೆಗೆ ಬೇಕಾಗಿದ್ದ ಆರೋಪಿ ನರೇಶ್ ಗೌಡ ಹಾಗೂ ಶ್ರವಣ್ ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ನಲ್ಲಿ ಕಿಂಗ್ ಪಿನ್ ಗಳು ಎಂಬುದಾಗಿ ಆರೋಪಿಗಳಾದ ನರೇಶ್ ಗೌಡ, ಶ್ರವಣ್ ಅವರನ್ನು ಕರೆಯಲಾಗುತ್ತಿತ್ತು. ತನಿಖೆಗೆ ಸಿಗದೇ ಮಾರ್ಚ್ 2ರಿಂದ ತಲೆಮರೆಸಿಕೊಂಡು, ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರಿನ 91ನೇ ಸಿಸಿಹೆಚ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂತಹ ಆರೋಪಿಗಳಿಗೆ ಇದೀಗ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು, ಪ್ರಕರಣದಲ್ಲಿ ಹನಿಟ್ರ್ಯಾಫ್, ಹಣ ಸುಲಿಗೆ, ಬ್ಲಾಕ್ ಮೇಲ್ ಪ್ರಕರಣವನ್ನು ನರೇಶ್, ಶ್ರವಣ್ ವಿರುದ್ಧ ದಾಖಲಿಸಿದ್ದರು.