Saturday, 27th July 2024

ಸಿಎಂ ಯಡಿಯೂರಪ್ಪ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು : ರಾಜಭವನಕ್ಕೆ ಕಾಲ್ನಡಿಗೆಯಲ್ಲೇ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಿಎಂ ಯಡಿಯೂರಪ್ಪ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದು 2 ವರ್ಷದ ಸಂದರ್ಭದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದರು.

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಅಮಿತ್ ಶಾಗೆ, ಜೆಪಿ ನಡ್ಡಾ ಅವರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ. 75 ವರ್ಷ ದಾಟಿದ ಯಾರಿಗೂ ದೇಶದಲ್ಲಿ ಎಲ್ಲಿಯೂ ಬಿಜೆಪಿ ಪಕ್ಷ ಅಧಿಕಾರ ನೀಡಿಲ್ಲ. ನನ್ನ ಮೇಲೆ ನಂಬಿಕೆ ಇಟ್ಟು ನೀಡಿದ್ದರು. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

2 ತಿಂಗಳ ಹಿಂದೆಯೇ ರಾಜೀನಾಮೆ ನೀಡಬೇಕು ಎಂಬುದಾಗಿ ತೀರ್ಮಾನಿಸಿದ್ದೆ. ಆದ್ರೇ ಆ ಸಂದರ್ಭದಲ್ಲಿ ಸರಿಯಲ್ಲ ಎಂಬುದಾಗಿ ತಿಳಿಸಿದ್ದರು. ಹೀಗಾಗಿ ಇಂದು 2 ವರ್ಷ ಬಿಜೆಪಿ ಸರ್ಕಾರಕ್ಕೆ ತುಂಬಿದ ಸಂದರ್ಭದಲ್ಲಿ ನೀಡಿದ್ದೇನೆ. ರಾಜ್ಯದ ಜನರಿಗೆ, ಶಿಕಾರಿಪುರ ಕ್ಷೇತ್ರದ ನನ್ನ ಜನತೆಗೆ ಧನ್ಯವಾದಗಳು ಎಂಬುದಾಗಿ ಹೇಳಿದರು.

ನಾನು ಮುಂದಿನ ಸಿಎಂ ಯಾರಾಗಬೇಕು ಎಂಬುದನ್ನು ಯಾರನ್ನು ಸೂಚಿಸಿಲ್ಲ. ನನಗೆ ಎಲ್ಲಾ ರೀತಿಯ ಸ್ಥಾನಮಾನ ವನ್ನು ಬಿಜೆಪಿ ರಾಷ್ಟ್ರೀಯ ನಾಯಕರು ನೀಡಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಮುಂದಿನ ದಿನಗಳಲ್ಲಿ ಪಕ್ಷ ವನ್ನು ಸಂಘಟಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಆ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡೋಣ ಎಂಬುದಾಗಿ ತಿಳಿಸಿದರು.

 

Leave a Reply

Your email address will not be published. Required fields are marked *

error: Content is protected !!