Saturday, 27th April 2024

ಮುಖ್ಯಮಂತ್ರಿ ಬಿಎಸ್‌ವೈ ಇಂದು ದಿಲ್ಲಿ ಪ್ರವಾಸ

ಬೆಂಗಳೂರು: ಮುಖ್ಯಮಂತ್ರಿ ಬಿಎಸ್‌ವೈ ಅವರು ಬುಧವಾರ ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬುಧವಾರ ಬೆಳಗ್ಗೆ 10.30ಕ್ಕೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಬೆಳಗ್ಗೆ 11.30ಕ್ಕೆ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ಯಡಿಯೂರಪ್ಪ ಅವರು ವಿಶೇಷ ವಿಮಾನದಲ್ಲಿ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಕೆಲವರನ್ನು ಸಂಪುಟದಿಂದ ಕೈಬಿಡಬೇಕಾದ ಅನಿವಾರ್ಯದ ಬಗ್ಗೆ ಸಿಎಂ ಸಭೆಯಲ್ಲಿ ಪ್ರಸ್ತಾವಿಸುವ ಸಾಧ್ಯತೆ ಇದೆ.

ಸಂಪುಟದಲ್ಲಿ ಸದ್ಯ ಏಳು ಸಚಿವ ಸ್ಥಾನಗಳು ಖಾಲಿ ಇವೆ. ನಾಲ್ಕೈದು ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಯಡಿಯೂ ರಪ್ಪ ಗಂಭೀರವಾಗಿ ಚಿಂತಿಸಿದ್ದಾರೆ. ಇದರಿಂದ ಖಾಲಿ ಉಳಿಯುವ ಸಚಿವ ಸ್ಥಾನಗಳ ಸಂಖ್ಯೆ 11 ಇಲ್ಲವೇ 12ಕ್ಕೆ ಏರಿಕೆಯಾಗಲಿದೆ.

ವಿಧಾನ ಪರಿಷತ್‌ ಸದಸ್ಯರಾದ ಆರ್‌. ಶಂಕರ್‌, ಎಂ.ಟಿ.ಬಿ. ನಾಗರಾಜ್‌ ಜತೆಗೆ ಇತ್ತೀಚೆಗಷ್ಟೇ ಉಪಚುನಾವಣೆಯಲ್ಲಿ ಗೆದ್ದ ಮುನಿರತ್ನ ಅವರಿಗೆ ಸಚಿವ ಸ್ಥಾನ ಖಚಿತ.

Leave a Reply

Your email address will not be published. Required fields are marked *

error: Content is protected !!