Saturday, 27th April 2024

ಸಂಸದ ತೇಜಸ್ವಿ ನಿವಾಸದತ್ತ ಕಾಂಗ್ರೆಸ್ ಕಾರ್ಯಕರ್ತರ ಮೆರವಣಿಗೆ: ಪೊಲೀಸರಿಂದ ತಡೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಸಬಹುದಿತ್ತು ಎಂದು ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ಅವರ ಮನೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸಂಸದರ ನಿವಾಸದತ್ತ ಮೆರವಣಿಗೆ ಹೊರಟ ಕಾಂಗ್ರೆಸ್ ಕಾರ್ಯಕರ್ತರು ಕಲ್ಲುಗಳನ್ನು ಕೊಟ್ಟು, ಹೊಡೆಸುವಂತೆ ಸವಾಲು ಹಾಕುವ ಪ್ರಯತ್ನ ಮಾಡಿ ದ್ದಾರೆ. ಕಲ್ಲು ಹೊಡೆಯುವ ಮನಸ್ಥಿತಿ ಬೇಡ ಎಂದು ತಿಳಿ ಹೇಳಲು ಹೂ ಗಳನ್ನು ಉಡುಗೊರೆ ನೀಡಲು ಯತ್ನಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಅರ್ಧ ದಾರಿಯಲ್ಲೇ ತಡೆದು ವಶಕ್ಕೆ ಪಡೆದುಕೊಂಡಿದ್ದಾರೆ. ಹೀಗಾಗಿ ಪ್ರತಿಭಟನೆಗೆ ಅವಕಾಶ ಸಿಗದೆ ಕಾರ್ಯ ಕರ್ತರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತೆ ಮೀನಾ ಅವರು ಸಂಸದರ ಮನೆಯ ಒಳಗೆ ಹೋಗಿ ಹೂಗಳನ್ನು ಇಟ್ಟು ಹೊರಬಂದಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿ ದ್ದಾರೆ.

ಸಂಸದ ತೇಜಸ್ವಿ ಸೂರ್ಯ ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಯುವ ಘಟಕದ ಪದಾಕಾರಿಗಳೊಂದಿಗೆ ಸಂಭಾಷಣೆ ನಡೆಸುವಾಗ ಆಕ್ಷೇಪಾರ್ಹ ಹೇಳಿಕೆಗಳನ್ನು ಹೇಳಿದ್ದರು.

ದಕ್ಷಿಣ ಕನ್ನಡದಲ್ಲಿ ನಡೆದ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಬಿಜೆಪಿಯ ಪದಾಕಾರಿಗಳು ರಾಜೀನಾಮೆ ನೀಡುತ್ತಿದ್ದಾರೆ. ಇದನ್ನು ತಡೆಯುವ ಯತ್ನದಲ್ಲಿ ಸಂಸದ ತೇಜಸ್ವಿ ಸೂರ್ಯ ಪಕ್ಷದ ಪದಾಕಾರಿಗಳ ಜೊತೆ ಸಂಭಾಷಣೆ ನಡೆಸಿದರು.

error: Content is protected !!