ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್..ಯಡಿಯೂರಪ್ಪ, ಪುತ್ರ ವಿಜಯೇಂದ್ರ ವಿರುದ್ಧ ಎಚ್.ವಿಶ್ವನಾಥ್ ಅವರು ವಿರುದ್ದ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.
ನೀರಾವರಿ ಇಲಾಖೆಯಲ್ಲಿ 20 ಸಾವಿರ ಕೋಟಿ ಟೆಂಡರ್ ಕರೆದಿದ್ದಾರೆ. ಇದಕ್ಕೆ ಆರ್ಥಿಕ ಇಲಾಖೆ ಒಪ್ಪಿಗೆ ಪಡೆದಿಲ್ಲ, ನೀರಾವರಿ ನಿಗಮಗಳ ಒಪ್ಪಿಗೆ ಪಡೆದಿಲ್ಲ. ಜಿಂದಾಲ್ ಭೂಪರಭಾರೆಯಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.
ವಿಜಯೇಂದ್ರ ಭ್ರಷ್ಟಾಚಾರದ ಬಗ್ಗೆ ಅರುಣ್ ಸಿಂಗ್ ಬಳಿ ಹೇಳಿದ್ದೇನೆ. ನಾಯಕತ್ವ ಬದಲಾವಣೆ ಆಗಲೇಬೇಕು.
ನಾಯಕತ್ವ ಬದಲಾವಣೆಗೆ ಕಾರಣ ಕೊಟ್ಟಿದ್ದೇನೆ ಎಂದು ಹೇಳಿದರು.