Monday, 20th May 2024

ಕೆಎಸ್‌’ಆರ್‌’ಟಿಸಿ ಬಸ್ ಟಿಕೆಟ್’ನಲ್ಲಿ ಕೊರೊನಾ ಜಾಗೃತಿ ಸಂದೇಶ

ಬೆಂಗಳೂರು: ಮೊಬೈಲ್ ಕಾಲರ್ ಟ್ಯೂನ್ ನಿಂದ ಹಿಡಿದು ಸಾರ್ವಜನಿಕ ಪ್ರದೇಶಗಳಲ್ಲಿ ಬ್ಯಾನರ್, ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಕಟಣೆಗಳಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಇಂಥ ಸಂದರ್ಭದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸ ಮಾರ್ಗವನ್ನು ಕಂಡುಕೊಂಡಿದೆ.

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೀಡುವ ಬಸ್ ಟಿಕೆಟ್ ನಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಯಾವೆಲ್ಲ ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು ಎಂಬ ಸಂದೇಶವನ್ನು ಮುದ್ರಿಸಲಾಗುತ್ತಿದೆ. ಬಸ್ ಟಿಕೆಟ್ ನಲ್ಲಿ “ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿ, ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಆರಂಭಿಕ ಕೊವಿಡ್-19 ಪರೀಕ್ಷೆಯು ಜೀವವನ್ನು ಕಾಪಾಡುತ್ತದೆ” ಎಂದು ಮುದ್ರಿಸ ಲಾಗಿದೆ.

Leave a Reply

Your email address will not be published. Required fields are marked *

error: Content is protected !!