Saturday, 27th April 2024

ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ನಿಧನಕ್ಕೆ ಡಿಸಿಎಂ ಸವದಿ ಸಂತಾಪ

ಬೆಂಗಳೂರು: ಯಕ್ಷಗಾನ ಕಲಾವಿದ ಮತ್ತು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿದ್ದ ಪ್ರೊಫೆಸರ್ ಎಂ.ಎ. ಹೆಗಡೆ, ದಂಟಕಲ್ ಅವರು ನಿಧನರಾದ ಸುದ್ದಿ ಕೇಳಿ ನನಗೆ ದಿಗ್ಭ್ರಮೆಯಾಯಿತು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ದಿವಂಗತ ಹೆಗಡೆಯವರು ಉತ್ತಮ ವಾಗ್ಮಿಗಳು, ಕನ್ನಡ ಮತ್ತು ಸಂಸ್ಕೃತದ ಪಂಡಿತರು, ಸ್ವತಃ ಯಕ್ಷಗಾನ ಕಲಾವಿದರಾಗಿ ಕನ್ನಡ ನಾಡು-ನುಡಿಗೆ ಅಪಾರ ಕೊಡುಗೆ ನೀಡಿದ್ದರು. ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಹಲವು ಹೊಸ ತನದ ಅರ್ಥಪೂರ್ಣ ಕಲಾ ಚಟುವಟಿಕೆಗಳನ್ನು ನಡೆಸಿಕೊಂಡು ಬಂದು, ಹಲವು ಅಭಿಜಾತ ಕಲಾವಿದರಿಗೆ ಪ್ರೋತ್ಸಾಹ ಮಾರ್ಗದರ್ಶನ ನೀಡಿದ್ದರು.

ಶ್ರೀ ಹೆಗಡೆ ಅವರ ಅಗಲಿಕೆ ನಿಜಕ್ಕೂ ಕನ್ನಡದ ಸೃಜನಶೀಲ ಕ್ಷೇತ್ರಕ್ಕೆ ದೊಡ್ಡ ನಷ್ಟವೇ ಸರಿ. ಅವರ ಆತ್ಮಕ್ಕೆ ಭಗವಂತನು ಚಿರ ಶಾಂತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತಾ, ಅವರ ಕುಟುಂಬದವರಿಗೆ ನನ್ನ ಸಾಂತ್ವನ ಗಳನ್ನು ತಿಳಿಸಬಯಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!