ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೊರ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಮಂಗಳವಾರ ಗಮನಾರ್ಹ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಬೆಂಗಳೂರಿನ ಮೆಜೆಸ್ಟಿಕ್ ನಿಲ್ದಾಣಕ್ಕೆ ಖುದ್ದಾಗಿ ತೆರಳಿ ಹೆಚ್ಚುವರಿ ಬಸ್ಸುಗಳ ಸಮರ್ಪಕ ವ್ಯವಸ್ಥೆಯನ್ನು ಪರಿಶೀಲಿಸಿದರು.
ಕೆಎಸ್ ಆರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅವರು ಕೂಡ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಭೇಟಿ ಕೊಟ್ಟಿದ್ದರು.