Tuesday, 22nd October 2024

ಗಣಪತಿ ಭಟ್ ಬಂಧನ ಪ್ರಶ್ನಿಸಿದ ಬಿ ಕೆ ಹರಿಪ್ರಸಾದ್

ಬೆಂಗಳೂರು: ಪಿಎಸ್ಐ ಹಗರಣ ಸಂಬಂಧ ಸಿಐಡಿ ಮಂಗಳವಾರ ಬಂಧಿಸಿದ ಗಣಪತಿ ಭಟ್ ಗೂ ಗೃಹ ಸಚಿವರ ಕಚೇರಿಗೂ ಏನ್ ಸಂಬಂಧ ? ಎಂದು ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಸರಣಿ ಪ್ರಶ್ನೆ ಹಾಕಿದ್ದಾರೆ.

ಗೃಹ ಸಚಿವರ ಕಚೇರಿಗೆ ಆರೋಪಿ ಗಣಪತಿ ಭಟ್ ಬರ್ತಾ ಇದ್ದಿದ್ದು ನಿಜಾನಾ ? ಪಿಎಸ್ಐ ನೇಮಕಾತಿ ಹಗರಣ ನಡೆಯುತ್ತಿದ್ದ ದಿನಗಳ ಗೃಹ ಸಚಿವರ ಕಚೇರಿ, ಮನೆಯ ಸಿಸಿಟಿವಿಗಳ ದೃಶ್ಯಾವಳಿಗಳನ್ನು ಗೃಹ ಸಚಿವರು ಬಹಿರಂಗ ಮಾಡುತ್ತಾರೆಯೇ ?

ಜನರಿಗೆ ವದಂತಿಗಳಿಂದ ಮುಕ್ತಿ ಕೊಟ್ಟು ಪಾರದರ್ಶಕವಾಗಿರಬೇಕಾದುದು ಗೃಹ ಸಚಿವರ ಕರ್ತವ್ಯ. ಗೃಹ ಸಚಿವರ ಕಚೇರಿ ಪಾಲುದಾರಿಕೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ ಎಂದು ಆಗ್ರಹಿಸಿದ್ದಾರೆ.