Monday, 20th May 2024

ಹಳ್ಳಿಹಕ್ಕಿ ಹೆಚ್.ವಿಶ್ವನಾಥ್’ಗೆ ಬಿಗ್ ಶಾಕ್

ಬೆಂಗಳೂರು : 2021ರವರೆಗೆ ಮಾಜಿ ಸಚಿವ ಹೆಚ್.ವಿಶ್ವನಾಥ್ ಸಚಿವರಾಗುವಂತಿಲ್ಲ ಎಂಬುದಾಗಿ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ಆದೇಶ ನೀಡಿದೆ. ಈ ಮೂಲಕ ಹಳ್ಳಿಹಕ್ಕಿ ಹೆಚ್ ವಿಶ್ವಾನಾಥ್ ಗೆ ಬಿಗ್ ಶಾಕ್ ನೀಡಿದೆ. ಅಲ್ಲದೇ, ಆರ್. ಶಂಕರ್, ಎಂ.ಟಿ.ಬಿ.ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡೋದಕ್ಕೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ಬಿಗ್ ರಿಲೀಫ್ ನೀಡಿದೆ.

ಹೆಚ್ ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ವಿಭಾಗಿಯ ಪೀಠ, ಹೆಚ್ ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ. ವಿಶ್ವನಾಥ್ ಅನರ್ಹತೆಯನ್ನು ಸಿಎಂ ಪರಿಗಣಿಸಬೇಕು. ಹೀಗಾಗಿ 2021ರವರೆಗೆ ಸಚಿವರಾಗಲು ಅರ್ಹರಲ್ಲ ಎಂಬುದಾಗಿ ಮಹತ್ವದ ಆದೇಶ ನೀಡಿದೆ.

ಇನ್ನೂ ಆರ್.ಶಂಕರ್, ಎಂ.ಟಿ.ಬಿ ನಾಗರಾಜ್ ಅವರು ಚುನಾವಣೆಯಲ್ಲಿ ಆಯ್ಕೆಗೊಂಡು ಎಂ.ಎಲ್ ಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಸಚಿವರಾಗಲು ಯಾವುದೇ ಅಡೆತಡೆಯಿಲ್ಲ. ಈ ಮೂಲಕ ಹಳ್ಳಿಹಕ್ಕಿ ಹೆಚ್ ವಿಶ್ವನಾಥ್ ಗೆ ಬಿಗ್ ಶಾಕ್ ನೀಡಿದ್ದರೇ, ಆರ್ ಶಂಕರ್, ಎಂಟಿಬಿ ನಾಗರಾಜ್ ಗೆ ಬಿಗ್ ರಿಲೀಫ್ ನೀಡಿದೆ.

Leave a Reply

Your email address will not be published. Required fields are marked *

error: Content is protected !!