Saturday, 27th July 2024

ಭಾರೀ ಮಳೆ: ರಾಜ್ಯದಲ್ಲಿ ಮೂರು ದಿನ ’ರೆಡ್‌ ಅಲರ್ಟ್”

ಬೆಂಗಳೂರು : ರಾಜ್ಯದಲ್ಲಿ ಇದೇ ತಿಂಗಳ 14ರಿಂದ ಸೆಪ್ಟೆಂಬರ್ 17ರವರೆಗೆ ಭಾರೀ ಮಳೆಯಾಗಲಿದೆ. ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ, ’ರೆಡ್ ಅಲರ್ಟ” ಘೋಷಣೆ ಮಾಡಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್ ಪಾಟೀಲ್, ರಾಜ್ಯದಲ್ಲಿ ಕರಾವಳಿ ಭಾಗ ದಲ್ಲಿ ಇಂದಿನಿಂದ ಸೆಪ್ಟೆಂಬರ್ 17ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವುದಾಗಿ ತಿಳಿಸಿದ್ದಾರೆ.

ಇನ್ನೂ ಸೆ.14ರಿಂದ ಸೆ.17ರವರೆಗೆ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಿದ್ದು,  ಕಲಬುರ್ಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 17ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿಲಾಗಿದೆ. ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ಭಾರೀ ಮಳೆಯಾಗುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!