Thursday, 19th September 2024

ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸಿದರು.

ಬಜೆಟ್ ಗಾತ್ರ 3 ಲಕ್ಷ 7 ಸಾವಿರ ಕೋಟಿ ರೂ.ಇದ್ದು, ಇದೇ ಮೊದಲ ಬಾರಿಗೆ ದೊಡ್ಡ ಗಾತ್ರದ ಬಜೆಟ್ ಮಂಡಿಸಲಾಗುತ್ತಿದೆ.

ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.