Saturday, 27th July 2024

ಮೊದಲ ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರು

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರಾಗಿದ್ದಾರೆ. ಈ ಮೂಲಕ ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆ ಸಚಿವರ ಮುನಿಸು ಮುಂದುವರಿದಿದೆ.

ನೂತನ ಸಚಿವರಿಗೆ ಖಾತೆ ಹಂಚಿಕೆಯಾದ ನಂತರ ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ವಿಧಾನಸೌಧದಲ್ಲಿ ತಮ್ಮ ಸಹೋದ್ಯೋಗಿಗಳ ಜೊತೆ ಮೊದಲ ಸಭೆ ನಡೆಸಿದ್ದಾರೆ. ತಮ್ಮ ಇಲಾಖೆಯ ಕೆಲಸ ಕಾರ್ಯಗಳ ಆರಂಭ ದೃಷ್ಟಿಯಿಂದ ಈ ಸಭೆ ಪ್ರತಿಯೊಬ್ಬ ಸಚಿವರಿಗೂ ಮುಖ್ಯವಾಗುತ್ತದೆ.

ಖಾತೆಯ ಬಗ್ಗೆ ಖ್ಯಾತೆ ತೆಗೆಯದೆ ಸಿಕ್ಕಿರುವ ಖಾತೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಹೋಗುವಂತೆ ಈಗಾಗಲೇಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಆನಂದ್ ಸಿಂಗ್ ಅವರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದ್ದಾರೆ. ಬೇಕಿದ್ದರೆ ದೆಹಲಿಗೆ ಹೋಗಿ ಹೈಕಮಾಂಡ್ ಮುಂದೆ ತಮ್ಮ ಸಮಸ್ಯೆ ಹೇಳಿಕೊಳ್ಳಿ ಎಂದು ಆನಂದ್ ಸಿಂಗ್ ಅವರಿಗೆ ಈಗಾಗಲೇ ಹೇಳಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!