ಬೆಂಗಳೂರು: ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎನ್ನುವವರನ್ನು ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೋಲೀಸರು ಬಂಧಿಸಿದ್ದಾರೆ.
ಬೊಮ್ಮನಹಳ್ಳಿ ವಾರ್ ರೂಂ ಸಿಬ್ಬಂದಿಯ ಹೇಳಿಕೆ ಮತ್ತು ರೂಂನಲ್ಲಿದ್ದ ಸಿಸಿ ಟಿವಿ ಮಾಹಿತಿ ಆಧರಿಸಿ ಆರೋಪಿಯ ಬಂಧನ ವಾಗಿದೆ.
ಬೆಂಗಳೂರು ದಕ್ಷಿಣ ವಲಯದ ಕೋವಿಡ್ ವಾರ್ ರೂಮ್ ನಲ್ಲಿ ಭಾರೀ ಅವ್ಯವಹಾರ ನಡೆದಿದೆ ಎನ್ನಲಾಗಿ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ಸತೀಶ್ ರೆಡ್ಡಿ ಮೇ ತಿಂಗಳ ಆರಂಭದಲ್ಲಿ ಬಯಲು ಮಾಡಿದ್ದರು. ಇಡೀ ಪ್ರಕರಣವನ್ನು ಸಿಸಿಬಿ ತನಿಖೆ ನಡೆಸುತ್ತಿದೆ.