Thursday, 19th September 2024

ಮಾರ್ಚ್ 12ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ಮಾರ್ಚ್ 12ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು – ಮೈಸೂರು ಹೆದ್ದಾರಿಗೆ ಚಾಲನೆ ನೀಡಲಿದ್ದಾರೆ. ಎಸ್ ಪಿ ಜಿ ಅನುಮತಿಸಿದರೆ ಅಂದು ಸುಮಾರು ಎರಡು ಕಿಲೋಮೀಟರ್ ದೂರ ರೋಡ್ ಶೋ ಮಾಡುವ ಉದ್ದೇಶವನ್ನು ಹೊಂದಿರುವುದಾಗಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕರ್ನಾಟಕಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ನೂತನ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ನೆರವೇರಿಸಿ ಬಳಿಕ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಅಲ್ಲದೆ ಅಂದೇ ಬೆಳಗಾವಿಗೂ ತೆರಳಿ ರೋಡ್ ಶೋ ನಡೆಸುವುದರ ಜೊತೆಗೆ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.