ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಆಕ್ರೋಶ ವ್ಯಕ್ತಪಡಿಸಿ, ಅಂಬರೀಶ್ ಹೆಸರು ದುರ್ಬಳಕೆ ಬಗ್ಗೆ ಬೇಸರ ವ್ಯಕ್ತಪಡಿಸಿ, ಭಾವುಕರಾಗಿ ಮಾತನಾಡಿದ್ದಾರೆ.
ಅಂಬರೀಶ್ ಹೆಸರು ಹೇಳಲು ಯೋಗ್ಯತೆ ಇಲ್ಲದವರು ಹೆಸರು ಬಳಸಿ ರಾಜಕೀಯ ಮಾಡುತ್ತಿದ್ದಾರೆ. ಅಂಬರೀಶ್ ಕಾಲದಲ್ಲೇ ಅಕ್ರಮ ನಡೆದಿತ್ತು ಎಂದು ಆರೋಪ ಮಾಡುತ್ತಿದ್ದಾರೆ. ಅಂಬರೀಶ್ ಕಾಲದಲ್ಲಿ ಅಕ್ರಮ ನಡೆದಿದ್ದರೆ ದಾಖಲೆ ಸಮೇತ ದೂರು ನೀಡಲಿ, ಇಷ್ಟು ದಿನ ಸುಮ್ಮನೆ ಇದ್ದಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ಅಂಬರೀಶ್ ಸ್ಮಾರಕ ವಿಚಾರವಾಗಿ ಮಾತನಾಡಿದ್ದು ಸ್ವಲ್ಪ ನೆನಪು ಮಾಡಿಕೊಳ್ಳಲಿ. ಹಾಲಿ ಸಿಎಂ ಬಿಎಸ್ ಯಡಿಯೂರಪ್ಪ ಸಹಿ ಹಾಕಿದ್ದು ನನಗೆ ನೆನಪಿದೆ. ಸ್ಮಾರಕ ನಿರ್ಮಾಣ ಅಭಿಮಾನಗಳ ಬೇಡಿಕೆ ಅದಕ್ಕೆ ಅಂದಿನ ಸರ್ಕಾರ ಸ್ಪಂದಿಸಿದ ರೀತಿ ಜನರಿಗೆ ಗೊತ್ತಿದೆ ಎಂದರು.
ಪಿಎಂಜಿಎಸ್ ವೈ ಅನುಷ್ಠಾನಗೊಳಿಸುವುದು ಸಂಸದರ ಕೆಲಸ, ಈ ಬಗ್ಗೆ ಪ್ರಶ್ನಿಸಿದರೆ ಭ್ರಷ್ಟಾಚಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಉಲ್ಟಾ ಛೋರ್ ಕೊತ್ವಾಲ್ ಗೋ ಡಾಟೆ, ಕಳ್ಳನಾದವನು ಪೊಲೀಸರ ವಿರುದ್ಧವೇ ದೂರು ನೀಡುತ್ತಾನೆ ಎಂಬ ಮಾತಿದೆ. ಫೋನ್ ಟ್ಯಾಪಿಂಗ್ ಬಗ್ಗೆ ಸೂಕ್ತ ದಾಖಲೆಯಿದೆ. ಯಾವುದೇ ಒತ್ತಡಕ್ಕೆ ಒಳಗಾಗದೆ ತನಿಖೆ ನಡೆಸುತ್ತೇವೆ ಎಂದು ಪೊಲೀಸರ ಅಧಿಕಾರಗಳು ನನ್ನ ಬಳಿ ಹೇಳಿದ್ದಾರೆ.
ಬೇನಾಮಿ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪರ ಬಳಿ ಮಾತನಾಡುವೆ ಎಂದು ಸುಮಲತಾ ಹೇಳಿದರು.