Thursday, 19th September 2024

ಮಗನಿಗೆ ಟಿಕೆಟ್ ಕೊಡಿ, ನಾನು ಗೆಲ್ಲಿಸುತ್ತೇನೆ: ಎಂಟಿಬಿ ನಾಗರಾಜ್

ಬೆಂಗಳೂರು : ನಾನು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಮಗನಿಗೆ ಟಿಕೆಟ್ ಕೊಡಿ’ ಗೆಲ್ಲಿಸುತ್ತೇನೆ ಎಂದು ಹೇಳಿದ್ದೇನೆ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳ ಕಸರತ್ತು ಆರಂಭವಾಗಿದೆ. ಬಹಳ ಸಮಯದಿಂದಲೂ ಸಚಿವ ಎಂಟಿಬಿ ನಾಗರಾಜ್ ಅವರು ತಮ್ಮ ಮಗನಿಗೆ ಟಿಕೆಟ್ ಕೊಡಿ ಎಂದು ಕೇಳುತ್ತಾ ಬಂದಿದ್ದರು. ಇದೀಗ ಮತ್ತೊಮ್ಮೆ ನಾನು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಮಗನಿಗೆ ಟಿಕೆಟ್ ಕೊಡಿ’ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಇನ್ನೂ ಏ.9 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದ್ದು, ಬಹಳ ಕುತೂಹಲ ಮೂಡಿಸಿದೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆಯಾಗಿದ್ದು, ಹಲವೆಡೆ ಭಿನ್ನಮತ ಸ್ಪೋಟವಾಗಿದೆ.