ಬೆಂಗಳೂರು : ಮಾಸ್ಕ್ ಧರಿಸದ ಗ್ರಾಹಕರಿಗೆ ಹೋಟೆಲ್ ನೊಳಗೆ ಪ್ರವೇಶಿಸಲು ಅನುಮತಿ ನೀಡಬಾರದು ಎಂದು ಬಿಬಿಎಂಪಿ ಆಯುಕ್ತೆ ಎನ್. ಮಂಜುನಾಥ್ ಪ್ರಸಾದ್ ಅವರು ಹೋಟೆಲ್ ಗಳ ಮಾಲೀಕರಿಗೆ ಸೂಚನೆ ನೀಡಿದ್ದಾರೆ.
ಹೋಟೆಲ್ ಗಳಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಸೋಂಕು ಹರಡುವುದನ್ನು ತಡೆಯಲು ಸಹಕರಿಸಬೇಕು ಎಂದು ಹೋಟೆಲ್ ಮಾಲೀಕರಿಗೆ ಬಿಬಿಎಂಪಿ ಆಯುಕ್ತರು ಮನವಿ ಮಾಡಿದ್ದಾರೆ.
ಹೋಟೆಲ್ ಗಳಲ್ಲಿ 6 ಅಡಿಯಷ್ಟು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಗ್ರಾಹಕರು ಊಟ ಅಥವಾ ಕಾಫಿ ಸೇವಿಸುವ ವೇಳೆಯಲ್ಲಿ ಮಾತ್ರ ಮಾಸ್ಕ್ ತೆಗೆಯುವಂತೆ ನೋಡಿಕೊಳ್ಳಬೇಕು. ಹೋಟೆಲ್ ಪ್ರವೇಶ ದ್ವಾರದಲ್ಲಿ ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಕೋವಿಡ್ ನಿಯಮಗಳನ್ನು ಪಾಲಿಸದವರಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.