Saturday, 27th July 2024

ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಮಂಗಳವಾರ ಅಧಿಕಾರ ಸ್ವೀಕರಿಸಿ ದ್ದಾರೆ.

ಕಳೆದ ಸೋಮವಾರ ರಾಜ್ಯ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ನೂತನ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಿಸಿತ್ತು.

1991ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿಯವರು, ಹಾಸನ ಜಿಲ್ಲೆಯ ಎಎಸ್ಪಿಯಾಗಿ ತಮ್ಮ ಸೇವೆ ಆರಂಭಿಸಿದ್ದರು. ಅಲ್ಲದೇ ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತರು, ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಇಂದು ಅವರು ಕಮೀಷನರ್ ಕಚೇರಿಗೆ ತೆರಳಿ, ನಿರ್ಗಮಿತ ಆಯುಕ್ತ ಕಮಲ್ ಪಂತ್ ಅವರಿಂದ ಬ್ಯಾಟನ್ ಪಡೆಯುವ ಮೂಲಕ ಅಧಿಕಾರ ವಹಿಸಿಕೊಂಡರು.

error: Content is protected !!