Sunday, 8th September 2024

ಕೇಸರಿ ಧ್ವಜದ ಮುಂದೆ ಕುಗ್ಗಿದ ರಾಷ್ಟ್ರಧ್ವಜ: ಶಿಕ್ಷಣ ಸಚಿವರ ವಜಾಕ್ಕೆ ಆಗ್ರಹ

ಬೆಂಗಳೂರು: ಬಿ.ಸಿ ನಾಗೇಶ್ ಕೇಸರಿ ಧ್ವಜದ ಮುಂದೆ ರಾಷ್ಟ್ರಧ್ವಜವನ್ನು ಕುಗ್ಗಿಸಿದ್ದಾರೆ. ಭಗವಾಧ್ವಜವನ್ನು ರಾಷ್ಟ್ರಧ್ವಜವನ್ನಾ ಗಿಸುವ ಪ್ರಯತ್ನದ ಮುನ್ಸೂಚನೆಯೇ ಇದು ಬಿಜೆಪಿ ? ಸಿಎಂಗೆ ತಿರಂಗಾ ಮೇಲೆ ಗೌರವ ಇದ್ದಿದ್ದೇ ಆದರೆ ವಿವೇಕವಿಲ್ಲದ ಶಿಕ್ಷಣ ಸಚಿವರನ್ನು ವಜಾಗೊಳಿಸಲಿ ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಕೆಲವು ದಿನಗಳ ಹಿಂದೆ ಮಾಜಿ ಸಚಿವ ಈಶ್ವರಪ್ಪ ಭಗವಾಧ್ವಜವನ್ನು ರಾಷ್ಟ್ರಧ್ವಜ ಮಾಡುತ್ತೇವೆ ಎಂದಿದ್ದರು.

ಈ ಕುರಿತಂತೆ ಟ್ವಿಟ್ ಮಾಡಿದ್ದು, ಬಿಜೆಪಿ ನಕಲಿ ದೇಶಭಕ್ತರಿಗೆ ರಾಷ್ಟ್ರಧ್ವಜದ ಘನತೆಯೂ ತಿಳಿದಿಲ್ಲ, ದೇಶದ ಗೌರವವೂ ತಿಳಿದಿಲ್ಲ. ಎಷ್ಟಾದರೂ ಗೋಡ್ಸೆ ಭಕ್ತರಲ್ಲವೇ, ಭಗವಾಧ್ವಜದ ಆರಾಧಕರಲ್ಲವೇ, ಸಂವಿಧಾನ ವಿರೋಧಿಗಳಲ್ಲವೇ, ಮನದೊಳಗೆ ಸಂಘದ ಪಾಠವಾದ ತಿರಂಗಾ ದ್ವೇಷ ಇಟ್ಟುಕೊಂಡಿರುವ ನಳೀನ್ ಕುಮಾರ್ ಕಟೀಲ್ ಅವರಿಗೆ ಧ್ವಜ ತಲೆಕೆಳಗಾಗಿಸುವುದೇ ಮೂಲ ಅಜೆಂಡಾ ಇರುವಂತಿದೆ ಎಂದು ಹೇಳಿದೆ.

error: Content is protected !!