ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಂಡಿಸಿದ ವಿಧೇಯಕಕ್ಕೆ ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ‘ಕರ್ನಾಟಕ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡ ಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮ ಕಾತಿ ಅಥವಾ ಹುದ್ದೆಗಳಲ್ಲಿ ಮೀಸ ಲಾತಿ) ವಿಧೇಯಕ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆ ಹಾಗೂ ಪರಿಷತ್ನಲ್ಲಿ ಅಂಗೀಕಾರ ಗೊಂಡಿತ್ತು.
ಇದೀಗ ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಎಸ್ಸಿ ಸಮುದಾಯಕ್ಕೆ ಶೇ.15ರಷ್ಟಿದ್ದ ಮೀಸಲಾತಿಯನ್ನು ಶೇ.17ಕ್ಕೆ ಮತ್ತು ಎಸ್ಟಿ ಸಮುದಾಯಕ್ಕೆ ಶೇ.3ರಷ್ಟಿದ್ದ ಮೀಸ ಲಾತಿಯನ್ನು ಶೇ.7ಕ್ಕೆ ಹೆಚ್ಚಿಸಿ ಇತ್ತೀಚೆಗೆ ರಾಜ್ಯ ಸರ್ಕಾರ ಸುಗ್ರಿವಾಜ್ಞೆಗೆ ಅನುಮೋದನೆ ಪಡೆಯಲಾಗಿತ್ತು.