ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಶ್ನಿಸಲಾಗಿದ್ದ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ವಜಾಗೊಳಿಸಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ರಾಜ್ಯ ಸರ್ಕಾರದಿಂದ ಕರೋನಾ ಸೋಂಕಿನ ಮಧ್ಯೆಯೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿ ಯಿಂದ ಜು.19 ಹಾಗೂ 22ರಂದು ಪರೀಕ್ಷೆ ನಿಗದಿಪಡಿಸ ಲಾಗಿತ್ತು.
ಸೋಮವಾರ ರಾಜ್ಯ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸರ್ಕಾರವು ರಾಜ್ಯದಲ್ಲಿ ಕರೋನಾ ಪಾಸಿಟಿವಿಟಿ ದರ 1.48ಕ್ಕೆ ಇಳಿಕೆ ಕಂಡಿದೆ. ಕೋವಿಡ್ 2ನೇ ಅಲೆ ಕಡಿಮೆಗೊಂಡಿದೆ. ಹೀಗಾಗಿ ನಿಗದಿ ಪಡಿಸಿರುವಂತೆಯೇ ಪರೀಕ್ಷೆ ನಡೆಸಲಾಗುತ್ತದೆ ಎಂಬುದಾಗಿ ಮಾಹಿತಿ ನೀಡಿದೆ.
ಜುಲೈ.19 ಹಾಗೂ 22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಿಗದಿ ಪಡಿಸಲಾಗಿದೆ. 6 ದಿನದ ಪರೀಕ್ಷೆಯನ್ನು 2 ದಿನಗಳಿಗೆ ನಿಗದಿ ಪಡಿಸಲಾಗಿದೆ. ಕರೋನಾ ಸೋಂಕಿನ ಪಾಸಿಟಿವಿಟಿ ದರ ಕಡಿಮೆಗೊಂಡಿರುವ ಕಾರಣದಿಂದಾಗಿಯೇ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೈಕೋರ್ಟ್ ನ್ಯಾಯಪೀಠಕ್ಕೆ ಸರ್ಕಾರ ಮನವಿ ಮಾಡಿತು.
ಹೈಕೋರ್ಟ್ ನ ನ್ಯಾಯಮೂರ್ತಿ ನಾಗರತ್ನ ಹಾಗೂ ನ್ಯಾಮೂರ್ತಿ ಸಂಜೀವ್ ಕುಮಾರ್ ದ್ವಿಸದಸ್ಯ ಪೀಠವು, ಒತ್ತಾಯದಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸ ಬಾರದು. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಪರೀಕ್ಷೆ ನಡೆಸುವುದು ಸೂಕ್ತ. ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧ ಸಲ್ಲಿಕೆಯಾಗಿದ್ದ ಪಿಐಎಲ್ ಅರ್ಜಿಯನ್ನು ವಜಾಗೊಳಿಸಿ, ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದೆ.