Saturday, 27th July 2024

ಜಕ್ಕೂರಿನ ಮತಗಟ್ಟೆಯಲ್ಲಿ ಮತ ಚಲಾಯಿಸಿದ ತುಷಾರ್ ಗಿರಿನಾಥ್

ಬೆಂಗಳೂರು: ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರಿನ ಮತಗಟ್ಟೆಯಲ್ಲಿ ಸರತಿಯ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ತಮ್ಮ ಹಕ್ಕು ಚಲಾಯಿಸಿದ ಬಳಿಕ ಪೋಟೋಗೆ ಪೋಸ್ ನೀಡಿ ಮತ್ತಷ್ಟು ಜನರಿಗೆ ಮತ ಚಲಾಯಿಸುವಂತೆ ಕರೆ ನೀಡಿದ್ದಾರೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಬುಧವಾರ ಮತ ಚಲಾಯಿಸಿದ್ದಾರೆ. ಕುಟುಂಬ ಸಮೇತ ಆಗಮಿಸಿ ಬ್ಯಾಟರಾಯನಪುರ ಕ್ಷೇತ್ರದ ಜಕ್ಕೂರಿನ ಮತಗಟ್ಟೆ ನಂಬರ್​ 127ರಲ್ಲಿ ಮತದಾನ ಮಾಡಿದ್ದಾರೆ.

ಮತ ಹಾಕಿ ಮಾತನಾಡಿರುವ ಅವರು, ನನ್ನ ಮಕ್ಕಳು ಮೊದಲ ಬಾರಿ ಮತ ಚಲಾಯಿಸು ತ್ತಿದ್ದಾರೆ. ನಾವೇ ನಂ 127 ಮತಗಟ್ಟೆಯಲ್ಲಿ ಮೊದಲ ಮತದಾರರು. ಈ ಬಾರಿ ವಿವಿಧ ಥೀಮ್‌ಗಳಲ್ಲಿ ಬೂತ್‌ಗಳನ್ನು ಬೂತ್ ಮಾಡಿದ್ದೇವೆ. ಮತದಾನಕ್ಕೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಈ ಥೀಮ್ ಬೂತ್ ಮಾಡಲಾಗಿದೆ” ಎಂದಿದ್ದಾರೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್​ ಅವರು ಪತ್ನಿ ವನಿತಾ ಸೂದ್​ ಜೊತೆ ಸರ್ ಎಂ.ವಿಶ್ವೇಶ್ವರಯ್ಯ ಪದವಿ ಪೂರ್ವ ಕಾಲೇಜಿನಲ್ಲಿ ಮತದಾನ ಮಾಡಿದ್ದಾರೆ.

error: Content is protected !!