Saturday, 27th July 2024

ವರ್ತೂರ್‌’ರನ್ನು ಅಪಹರಿಸಿದ್ದ ಕಾರಿನಲ್ಲಿ ವೇಲ್ ಮಾದರಿ ಬಟ್ಟೆ ಪತ್ತೆ: ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು : ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕಿಡ್ನಾಪ್ ಮಾಡಿದ ಕಾರಿನಲ್ಲಿ ಮಹಿಳೆಯೊಬ್ಬರಿಗೆ ಸೇರಿದ ವೇಲ್ ಮಾದರಿಯ ಬಟ್ಟೆ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನವೆಂಬರ್ 25ರಂದು ಕೋಲಾರದಲ್ಲಿ ಅಪಹರಣಕ್ಕೀಡಾಗಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್, ಐದಾರು ದಿನಗಳ ಕಾಲ ದೂರು ನೀಡದೇ ಇರುವುದು ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ವರ್ತೂರು ಪ್ರಕಾಶ್ ಕಾರು ಚಾಲಕ ಕೂಡ ಯಾವುದೇ ದೂರು ದಾಖಲಿಸಿಲ್ಲ. ಇನ್ನೊಂದು ವಿಚಾರವೆಂದರೆ ಕೋಲಾರದಲ್ಲಿ ದೂರು ನೀಡದೇ ಬೆಂಗಳೂರಿನಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿ ರುವುದು ಕೂಡ ಹಲವು ಅನುಮಾನಕ್ಕೆ ಕಾರಣ ಎನ್ನಲಾಗಿದೆ.

ಅಲ್ಲದೇ ವರ್ತೂರು ಅವರನ್ನು ಅಪರಣ ಮಾಡಿರುವುದರ ಹಿಂದೆ ಮಹಿಳೆಯೊಬ್ಬರ ಕೈವಾಡವಿದ್ದು, ಮಾಜಿ ಸಚಿವರು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿದ್ದ ಕಾರಿನಲ್ಲಿ ವೇಲ್ ಮಾದರಿಯ ಬಟ್ಟೆ ಪತ್ತೆಯಾಗಿದ್ದು, ಪ್ರಕರಣ ಮತ್ತಷ್ಟು ಟ್ವಿಸ್ಟ್ ಸಿಗುವ ಸಾಧ್ಯತೆ ಇದ್ದು, ಹುಡುಗಿ ವಿಚಾರಕ್ಕೆ ಕಿಡ್ನಾಪ್ ಮಾಡಲಾಗಿದೆ ಎನ್ನುವ ಅನುಮಾನಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ.

ತಮ್ಮನ್ನು ಅಪಹರಿಸಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದಲ್ಲದೆ, ಕೊಲೆ ಬೆದರಿಕೆಯನ್ನೂ ಹಾಕಲಾಗಿತ್ತು ಎಂದು ವರ್ತೂರು ಪ್ರಕಾಶ್ ಅವರು ನಿನ್ನೆ ಪೊಲೀಸರಿಗೆ ದೂರು ನೀಡಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!