Saturday, 7th September 2024

ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ಅಂತಿಮ…!

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದೆ.

ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸ್ಪೀಕರ್ ಹುದ್ದೆಗೆ ಸಂಬಂಧಿಸಿ ಹಲವು ಹಿರಿಯರ ಹೆಸರು ಕೇಳಿಬಂದಿತ್ತು. ಗದಗ ಶಾಸಕ ಎಚ್.ಕೆ ಪಾಟೀಲ್, ಶಿರಾ ಶಾಸಕ ಟಿ.ಬಿ ಜಯಚಂದ್ರ, ಮಧುಗಿರಿ ಶಾಸಕ ಕೆ.ಎನ್ ರಾಜಣ್ಣ ಮತ್ತು ಮುದ್ದೇಬಿಹಾಳ ಶಾಸಕ ಸಿ.ಎಸ್ ಅಪ್ಪಾಜಿ ನಾಡಗೌಡ ಅವರ ಹೆಸರುಗಳು ಚರ್ಚೆಯಲ್ಲಿತ್ತು.

ಸೋಮವಾರ ರಾತ್ರಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರೆ ಮಾಡಿ ಸ್ಪೀಕರ್ ಸ್ಥಾನ ಒಪ್ಪುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಬುಧವಾರ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯ್ಕೆಯಾದ ಕೇವಲ ಇಬ್ಬರು ಕಾಂಗ್ರೆಸ್ ಶಾಸಕರಲ್ಲಿ ಖಾದರ್ ಒಬ್ಬರು.

error: Content is protected !!