Friday, 25th October 2024

ನಾನು ಕನ್ನಡದಲ್ಲೇ ಮಾತನಾಡುತ್ತೇನೆ, ಇಂಗ್ಲೀಷ್‌ನಲ್ಲಿ ಭಾಷಣ ಮಾಡುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ‘ನಮ್ಮ ಮೆಟ್ರೊ’ದ ಕೆ.ಆರ್‌.ಪುರ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟದ ವಿಸ್ತರಿತ ಮಾರ್ಗವನ್ನುಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಸಾಹಿಬಾಬಾದ್‌ನಿಂದ ವರ್ಚುವಲ್‌ ಮೂಲಕ ಶುಕ್ರವಾರ ಉದ್ಘಾಟಿಸಿದರು.

ವರ್ಚುವಲ್ ಸಭೆ ಮೂಲಕ ಬೆಂಗಳೂರಿನಿಂದ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡದಲ್ಲೇ ಭಾಷಣ ಮಾಡಿದರು.

ಉದ್ಘಾಟನೆ ವೇಳೆ ಸಿದ್ದರಾಮಯ್ಯ ಅವರಿಗೆ ‘ನಿಮ್ಮ ಫೋಟೊವನ್ನೂ ಹಾಕಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಎಲ್ಲಿದೆ ಎಂದು ಸಿದ್ದರಾಮಯ್ಯ ಸಹ ಕೇಳಿದರು. ನಂತರ ಪರದೆಯ ಮೇಲೆ ಬಂದ ಅವರ ಫೋಟೊವನ್ನು ವೀಕ್ಷಿಸಿದರು. ಅಲ್ಲೇ ಇದ್ದವರೊಬ್ಬರು, ಯಾವ ಭಾಷೆಯಲ್ಲಿ ಮಾತನಾಡುತ್ತೀರಿ ಎಂದಾಗ, ‘ನಾನು ಕನ್ನಡದಲ್ಲೇ ಮಾತನಾಡುತ್ತೇನೆ. ಕರ್ನಾಟಕದಲ್ಲಿ ನಾನು ಭಾಷಣ ಮಾಡುತ್ತಿರುವುದು. ಅವರಿ ಗೋಸ್ಕರ ಇಂಗ್ಲೀಷ್‌ನಲ್ಲಿ ಭಾಷಣ ಮಾಡುವುದಿಲ್ಲ’ ಎಂದು ಸಿದ್ದರಾಮಯ್ಯ ಹೇಳಿದರು

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕೂಡ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಿದ್ದರು.