Sunday, 19th May 2024

ಬಜ್ಪೆ: ಸೇತುವೆಯ ಪಿಲ್ಲರ್ ಕುಸಿದು ಸಂಚಾರ ಸ್ಥಗಿತ

ಮಂಗಳೂರು: ಮಂಗಳೂರು ಹೊರವಲಯದ ಬಜ್ಪೆಯ ಮರವೂರು ಬಳಿ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯ ಸೇತುವೆಯ ಪಿಲ್ಲರ್ ಕುಸಿದು ಸಂಚಾರ ಸ್ಥಗಿತಗೊಂಡಿದೆ.

ಹೊಸ ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ಒಂದೇ ಭಾಗದಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಪರಿಣಾಮ, ಸೇತುವೆಯ ಪಿಲ್ಲರ್ ಕುಸಿದಿದ್ದು, ಸೇತುವೆಗೆ ಹಾನಿಯಾಗಿದೆ. ಮಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಸಂಚಾರ ಸಂಪೂರ್ಣ ಸ್ಥಗಿತಗೊಳಿಸ ಲಾಗಿದೆ.

ಉಡುಪಿಯಿಂದ ಬರುವವರು ಮೂಲ್ಕಿಯಲ್ಲಿ ತಿರುವು ಪಡೆದು ಕಿನ್ನಿಗೋಳಿ-ಕಟೀಲು ರಸ್ತೆಯಾಗಿ ವಿಮಾನ ನಿಲ್ದಾಣಕ್ಕೆ ತೆರಳು ವಂತೆ, ಮಂಗಳೂರು ನಗರದಿಂದ ಬರುವವರು ನಂತೂರಿನಲ್ಲಿ ತಿರುವು ಪಡೆದು ಕುಲಶೇಖರ-ಗುರುಪುರ ರಸ್ತೆಯಾಗಿ ವಿಮಾನ ನಿಲ್ದಾಣಕ್ಕೆ ತೆರಳುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!