ನೆಲಮಂಗಲ: ಸೇತುವೆ ಕುಸಿದು ಬಿದ್ದು ಎರಡು ದಿನ ಕಳೆದರೂ ಭೇಟಿ ಕೊಡದ ಅಧಿಕಾರಿಗಳ ವಿರುದ್ಧ ಶಾಸಕರು ಗರಂ ಆದ ಘಟನೆ ನಡೆದಿದೆ.
ಸೋಲೂರು ಹೋಬಳಿಯನ್ನು ತಾತ್ಸಾರ ಮಾಡುತ್ತಿದ್ದ ತಹಸೀಲ್ದಾರ್ ಹಾಗೂ ಅಧಿಕಾರಿಗಳಿಗೆ ಚಳಿ ಬಿಡಿಸಿದ ಶಾಸಕರು, ಸಂಪರ್ಕ ಸೇತುವೆ ನಿರ್ಮಾಣಕ್ಕೆ 3 ಕೋಟಿ 25 ಲಕ್ಷ ಬಿಡುಗಡೆ ಮಾಡುವುದಾಗಿ ಶಾಸಕ ಎನ್ ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ.
ನೆಲಮಂಗಲ ವಿಧಾನಸಭಾ ಕ್ಷೇತ್ರದ ಸೋಲೂರು ಹೋಬಳಿಯ ತೊರೆ ಚನ್ನಹಳ್ಳಿ ಗ್ರಾಮದಲ್ಲಿ ಧಾರಾಕಾರ ಮಳೆಯಿಂದ ಸಂಪರ್ಕ ಸೇತುವೆ ಕುಸಿದು ಬಿದ್ದು ಎರಡು ದಿನ ಕಳೆದರೂ ಸ್ಥಳಕ್ಕೆ ಭೇಟಿ ಕೊಡದೆ ಉದ್ಧಟತನ ಪ್ರದರ್ಶಿಸುತ್ತಿದ್ದ ಮಾಗಡಿ ತಹಸೀಲ್ದಾರ್ ಹಾಗೂ ಅಧಿಕಾರಿಗಳ ವಿರುದ್ಧ ಶಾಸಕ ಎನ್ ಶ್ರೀನಿವಾಸ್ ಕೆಂಡಾಮಂಡಲ ರಾದರು. ಸೋಲೂರು ಹೋಬಳಿಯ ಸಾರ್ವಜನಿಕರಿಂದ ಅಧಿಕಾರಿಗಳ ವಿರುದ್ಧ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: Nelamangala News: ನೆಲಮಂಗಲದಲ್ಲಿ ಕಾರ್ಮಿಕನ ಕೊಲೆ