Saturday, 27th July 2024

ಸಾರಿಗೆ ನೌಕರರ ಮುಷ್ಕರ: ತುಮಕೂರು ಜಿಲ್ಲೆಯಲ್ಲಿ ಪ್ರಯಾಣಿಕರ ಪರದಾಟ

ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಾದ್ಯಂತ ಪ್ರಯಾಣಿಕರ ಪರದಾಟ ಮುಂದುವರಿದಿದೆ.

ತುಮಕೂರು ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರಿಗೆ ತೊಂದರೆಯಾಗದ ರೀತಿಯಲ್ಲಿ ಖಾಸಗಿ ಬಸ್ಗಳ ಸಂಚಾರದ ನಡುವೆಯೂ ತುಮಕೂರು ಜಿಲ್ಲೆಯಾ ದ್ಯಂತ ಪ್ರಯಾಣಿಕರು ತಮ್ಮ ಊರುಗಳತ್ತ ಪ್ರಯಾಣಿಸಲು ಪರದಾಡುತ್ತಿದ್ದಾರೆ.

ತುಮಕೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳ ಸಂಚಾರ ಮಾಡಿದರು. ಕೆಲ ಖಾಸಗಿ ಬಸ್ ಮಾಲೀಕರು ಹೆಚ್ಚಿನ ಹಣ ಬೇಡಿಕೆಯಿಟ್ಟು ಸಾರ್ವಜನಿಕರನ್ನು ಕರೆದೊಯ್ಯುತ್ತಿರುವುದು ಕಂಡುಬಂದಿದೆ.

ಮುಷ್ಕರ ಹಿನ್ನೆಲೆಯಲ್ಲಿ ತಮ್ಮ ಸ್ವಂತ ಸ್ಥಳಗಳತ್ತ ತೆರಳಲು ಹಾಗೂ ಹೊರಜಿಲ್ಲೆಗಳಿಂದ ತುಮಕೂರಿಗೆ ಆಗಮಿಸುವ, ಹಾಗೂ ಹೊರ ಜಿಲ್ಲೆಗಳಿಗೆ ಪ್ರಯಾಣ ಬೆಳೆಸಲು ಸಾರ್ವಜನಿಕರ ಹಾಗೂ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *

error: Content is protected !!