Sunday, 19th May 2024

ಕಾಂಗ್ರೆಸ್ ಅನ್ನು ಸೋಲಿಸಿದ್ದು ಬಂಡೆ, ಹುಲಿ: ನಳಿನ್ ಕುಮಾರ್ ಕಟೀಲ್ ವ್ಯಂಗ್ಯ

ಉಡುಪಿ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಆರ್.ಆರ್.ನಗರವನ್ನು ಮಾಜಿ ಸಿಎಂ ಸಿದ್ದರಾಮಯ್ಯ, ಶಿರಾ ಕ್ಷೇತ್ರವನ್ನು ಡಿ.ಕೆ ಶಿವಕುಮಾರ್ ಸೋಲಿಸಿದ್ದಾರೆ ಎಂದು ಉಡುಪಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನಾಯಕರ ಕಾಲೆಳೆದಿದ್ದಾರೆ.

ಉಡುಪಿಯಲ್ಲಿ ನಡೆಯುತ್ತಿರುವ ಪ್ರಶಿಕ್ಷಣ ವರ್ಗಕ್ಕೆ ಆಗಮಿಸಿದ ಅವರು, ಕಾಂಗ್ರೆಸ್ ಕಾರ್ಯಕರ್ತರಿಗೂ ಅವರ ನಾಯಕರ ಜಗಳ ಗೊತ್ತಾಗಿ ಅಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂದು ಹೇಳಿದರು.

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವೈಯಕ್ತಿಕ ಟೀಕೆ ನಡೆಸಿತು. ಸಿಎಂ ಯಡಿಯೂರಪ್ಪ ಮತ್ತು ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿ ದರು. ಮುಂದೆ ಎರಡು ವಿಧಾನಸಭೆ, ಒಂದು ಲೋಕಸಭಾ ಚುನಾವಣೆ ಬರುತ್ತದೆ. ಆ ಚುನಾವಣೆಯಲ್ಲೂ ಬಿಜೆಪಿ ನೂರಕ್ಕೆ ನೂರ ರಷ್ಟು ಗೆಲ್ಲಲಿದೆ ಎಂದರು.

ಕಾಂಗ್ರೆಸ್ ನಲ್ಲಿ ಸ್ವಯಂಘೋಷಿತ ನಾಯಕರೇ ಹೆಚ್ಚಾಗಿದ್ದಾರೆ. ನಾನು ಬಂಡೆ, ನಾನು ಹುಲಿಯ ಅಂತ ಹೆಸರು ಇಟ್ಟುಕೊಂಡಿ ದ್ದಾರೆ. ತಾಲಿಬಾನಿಗಳು ಕೂಡಾ ಇದೇ ರೀತಿ ಹೆಸರು ಇಟ್ಟುಕೊಳ್ಳುತ್ತಾರೆ. ಇವತ್ತು ಹುಲಿಯೂ ಇಲ್ಲಾ, ಬಂಡೆಯ ಇಲ್ಲವೆಂದು ಲೇವಡಿ ಮಾಡಿದರು.

ಮುಂದಿನ ಎರಡೂವರೆ ವರ್ಷಗಳ ಕಾಲ ಯಡಿಯೂರಪ್ಪ ಅವರೇ ನಮ್ಮ ಸರ್ವಸಮ್ಮತ ನಾಯಕ. ಹುಡುಗನಿಗೆ ಪ್ರಾಯ ಆಗಿದೆ ಮದುವೆಗೆ ಹುಡುಗಿ ಹುಟ್ಟಿಯೇ ಇಲ್ಲ. ಕಾಂಗ್ರೆಸ್ ನವರು ಮದುವೆ ನಿಶ್ಚಯಕ್ಕೂ ಮೊದಲೇ ಮಗುವಿಗೆ ಹೆಸರಿಡಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕತ್ವಕ್ಕೆ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!