Saturday, 9th December 2023

ಚೆಕ್ ಬೌನ್ಸ್ ಪ್ರಕರಣ: ಕಾಫಿ ಡೇ ಸಿದ್ದಾರ್ಥ್ ಹೆಗ್ಡೆ ಪತ್ನಿಗೆ ಜಾಮೀನು

ಚಿಕ್ಕಮಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದ ಕಾಫಿ ಡೇ ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಅವರಿಗೆ ಜಾಮೀನು ನೀಡಲಾಗಿದೆ.

ಕಾಫಿ ಬೆಳೆಗಾರರ ಕೋಟ್ಯಾಂತರ ರೂಪಾಯಿ ಸಾಲ ಉಳಿಸಿಕೊಂಡಿದ್ದ ಹಿನ್ನಲೆಯಲ್ಲಿ ಕಾಫಿ ಬೆಳೆಗಾರರು ಎಬಿಸಿ ಸಂಸ್ಥೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನಲೆಯಲ್ಲಿ ನ್ಯಾಯಾಲಯ ಮಾಳವಿಕಾ ಸೇರಿದಂತೆ 8 ಮಂದಿಗೆ ನೋಟಿಸ್ ನೀಡಿತ್ತು.

ಆದರೆ ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಮಾಳವಿಕಾಗೆ ಬಂಧನ ವಾರಂಟ್ ಹೊರಡಿಸಿದ್ದರು. ಇದೀಗ ಮಾಳವಿಕಾ ಅವರು ಮೂಡಿಗೆರೆ ಜೆಎಂಎಫ್ಸಿ ಕೋರ್ಟ್ ಗೆ ಹಾಜರಾಗಿದ್ದು, ಮಾಳವಿಕಾ ಸೇರಿದಂತೆ ಐವರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಮೂಡಿಗೆರೆ ತಾಲೂಕಿನ ಕಾಫಿ ಬೆಳೆಗಾರ ನಂದೀಶ್ ಕೆ ಎಂಬುವವರು ಚೆಕ್ ಬೌನ್ಸ್ ಪ್ರಕರಣವನ್ನು ದಾಖಲಿಸಿದ್ದರು. ಎಬಿಸಿ ಕಂಪನಿ 45 ಲಕ್ಷ ಹಣ ನೀಡಬೇಕು. ಕೇವಲ 4 ಲಕ್ಷ ಮಾತ್ರ ನೀಡಿದೆ, ಉಳಿದ ಹಣವನ್ನು ಚೆಕ್ ನಲ್ಲಿ ನಮೂದಿಸಿಲ್ಲ. ಚೆಕ್ ಕೂಡ ಬೌನ್ಸ್ ಆಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!