Saturday, 27th July 2024

ಶೃಂಗೇರಿ, ಚಿಕ್ಕಮಗಳೂರು, ತರಿಕೆರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್’ಗೆ ಮುನ್ನಡೆ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ, ಚಿಕ್ಕಮಗಳೂರು, ತರಿಕೆರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಶೃಂಗೇರಿಯಲ್ಲಿ ಟಿ.ಡಿ.ರಾಜೇಗೌಡ ಅವರು ಎರಡನೇ ಸುತ್ತಿನಲ್ಲಿ ಬಿಜೆಪಿ ಎನ್.ಡಿ.ಜಿವರಾಜ್ ವಿರುದ್ಧ ನಾಲ್ಕು ಸಾವಿರ ಮತಗಳ ಅಂತರದಿಂದ ಮುಂದಿದ್ದಾರೆ.

ಚಿಕ್ಕಮಗಳೂರು ಕ್ಷೇತ್ರದಲ್ಲಿ ಎಚ್.ಡಿ.ತಮ್ಮಯ್ಯ ಅವರು ಬಿಜೆಪಿಯ ಸಿ.ಟಿ.ರವಿ ವಿರುದ್ಧ ಮೊದಲ ಸುತ್ತಿನಲ್ಲಿ ೮೬ ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ತರೀಕೆರೆ ಕ್ಷೇತ್ರದಲ್ಲಿ ಅಭ್ಯರ್ಥಿ ಜಿ.ಎಚ್.ಶೀನಿವಾಸ್ ಅವರು ಬಿಜೆಪಿಯ ಸುರೇಶ್ ವಿರುದ್ಧ ಮೊದಲ ಸುತ್ತಿನಲ್ಲಿ 1255 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನು ಕಡೂರು ಕ್ಷೇತ್ರದಲ್ಲಿ ಬಿಜೆಪಿಯ ಬೆಳ್ಳಿ ಪ್ರಕಾಶ್ ೯೫೫ ಮತಗಳಿಂದ ಕಾಂಗ್ರೆಸ್ ನ ಆನಂದ್ ವಿರುದ್ಧ ಮುನ್ನೆಡೆ ಸಾಧಿಸಿದ್ದಾರೆ. ಮುಡಿಗೆರೆಯಲ್ಲಿ ನಯನಾ ಮೋಟಮ್ಮ ಅವರು ಬಿಜೆಪಿಯ ದೀಪಕ್ ದೊಡ್ಡಯ್ಯ ವಿರುದ್ಧ 97 ಮತಗಳ ಅಲ್ಫ ಮುನ್ನಡೆ ಸಾಧಿಸಿದ್ದಾರೆ.

ಎಸ್​ಟಿ ಸೋಮಶೇಖರ್, ಸುಧಾಕರ್, ರಮೇಶ್ ಜಾರಕಿಹೊಳಿ, ಬಿ.ಸಿ ಪಾಟೀಲ್, ಎಂಟಿಬಿ ನಾಗರಾಜ್ ಮುಂತಾದವರು ಹಿನ್ನಡೆ ಅನುಭವಿಸುತ್ತಿದ್ದಾರೆ.

 

error: Content is protected !!