ಬಾಗೇಪಲ್ಲಿ: ವಿಧಾನಸಭಾ ಕ್ಷೇತ್ರದ ಮೂರು ತಾಲ್ಲೂಕುಗಳಲ್ಲಿ ಬಹುತೇಕ ಎಲ್ಲಾ ಪ್ರಮುಖ ರಸ್ತೆಗಳು ಪೂರ್ಣ ಗೊಂಡಿವೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಚಿಂತಾಮಣಿ ಸಂರ್ಪಕ ಕಲ್ಪಿಸುವ ರಸ್ತೆ ಏಳು ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣವಾಗಲಿದೆ ಎಂದು ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ತಿಳಿಸಿದರು.
ಇಂದು ಮಿಟ್ಟೇಮರಿ, ಚಿಂತಾಮಣಿ ರಸ್ತೆಯಲ್ಲಿ ಏಳು ಕೋಟಿ ರೂಪಾಯಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಬಾಗೇಪಲ್ಲಿ ಯಿಂದ ಚಿಂತಾಮಣಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ 54. ಶಿಡ್ಲಘಟ್ಟ ಗಡಿಯಿಂದ ಮಿಟ್ಟಿಮರಿ ಗ್ರಾಮದವರಗೆ ಏಳು ಕೋಟಿ ರೂಪಾಯಿ ಅನುದಾನದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣ ವಾಗಲಿದೆ.
ಬಾಗೇಪಲ್ಲಿಯಿಂದ ಶಿಡ್ಲಘಟ್ಟ ಗಡಿಭಾಗದ ವರಿಗೆ ಈಗ ಸುಮಾರು ಇಪ್ಪತ್ತು ಐದು ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆಗಳ ಕಾಮಗಾರಿ ನಡೆಯುತ್ತಿದೆ ಇಂದು ಚಾಲನೆ ನೀಡಿರುವ ರಸ್ತೆ ಕಾಮಗಾರಿ ಮಾರ್ಚ್ ತಿಂಗಳೊಳಗೆ ಪೂರ್ಣ ಗೊಳುತ್ತದೆ. ಈಗಾಗಲೇ ಮಿಟ್ಟಿಮರಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಲಾಗುತ್ತಿದೆ, ಗ್ರಾಮದಲ್ಲಿ ವಿಭಜಕ ನಿರ್ಮಾಣ ಮಾಡಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗುವುದು ಹಾಗೂ ಗ್ರಾಮೀಣ ಭಾಗದ ರಸ್ತೆಗಳನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.
ಇದೆ ಸಂಧರ್ಭದಲ್ಲಿ ಮಿಟ್ಟೆಮರಿ ಗ್ರಾಮದಲ್ಲಿ ನೆಡೆಯುತ್ತಿರುವ ರಸ್ತೆ ಅಗಲೀಕರಣ ಮತ್ತು ರಸ್ತೆ ಕಾಮಗಾರಿಯನ್ನು ಪರೀಶೀಲನೆ ಮಾಡಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಎಇಇ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಬೂರಗಮೊಡುಗು ನರಸಿಂಹಪ್ಪ, ಮುಖಂಡರಾದ ಮಂಜುನಾಥ ರೆಡ್ಡಿ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ, ರಾಘವೇಂದ್ರ, ಕಾಮಿ ರೆಡ್ಡಿ, ಪೋಲಿಸ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ, ಇನ್ನೂ ಮುಂತಾದವರು ಇದ್ದರು.