Saturday, 27th April 2024

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ

ಮಂಗಳೂರು: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮನೆಯಲ್ಲಿ ವ್ಯಾಯಾಮ ಮಾಡುತ್ತಿರುವಾಗ ಕುಸಿದು ಬಿದ್ದು ತೀವ್ರವಾದ ಆಂತರಿಕ ಗಾಯಗಳಾಗಿದ್ದ ಪರಿಣಾಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗು ತ್ತಿತ್ತು.

ಆಸ್ಕರ್ ಫರ್ನಾಂಡಿಸ್, ಐಎನ್ ಸಿಯಲ್ಲಿ ಉನ್ನತ ಹುದ್ದೆಗಳನ್ನು ನಿಭಾಯಿಸಿ ಅನುಭವಿ ನಾಯಕ ರಾಗಿದ್ದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿಗೆ ರಾಜಕೀಯ ಕಾರ್ಯದರ್ಶಿಯಾಗಿದ್ದಷ್ಟೇ, ಅಲ್ಲದೇ ರಾಹುಲ್ ಗಾಂಧಿ ಅವರಿಗೂ ಆಸ್ಕರ್ ಆಪ್ತರಾಗಿದ್ದರು.

ಡಾ.ಮನಮೋಹನ್ ಸಿಂಗ್ ಅವರ ಯುಪಿಎ ಮೊದಲ ಸರ್ಕಾರದಲ್ಲಿ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದ ರಾಜ್ಯ ಖಾತೆ ಸಚಿವರಾಗಿದ್ದ ಆಸ್ಕರ್ ಫರ್ನಾಂಡಿಸ್ ಯುಪಿಎ-2 ನಲ್ಲಿ ಸಾರಿಗೆ, ರಸ್ತೆ ಹಾಗೂ ಹೆದ್ದಾರಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

1980 ರಲ್ಲಿ 7 ನೇ ಲೋಕಸಭೆಗೆ ಉಡುಪಿ ಕ್ಷೇತ್ರದಿಂದ ಮೊದಲ ಬಾರಿ ಸಂಸತ್ ಗೆ ಆಯ್ಕೆಯಾಗಿದ್ದ ಆಸ್ಕರ್ ಫರ್ನಾಂಡಿಸ್ 1984, 1989, 1991, 1996 ರಲ್ಲಿ ಸತತವಾಗಿ ಆಯ್ಕೆಯಾಗಿದ್ದರು. 1998 ರಲ್ಲಿ ರಾಜ್ಯಸಭೆಗೆ ಮೊದಲ ಬಾರಿ ಆಯ್ಕೆಯಾದ ಅವರು, 2004 ರಲ್ಲಿ ಮರು ಆಯ್ಕೆಯಾದರು.

ಕೇಂದ್ರ ಸಚಿವರಾಗಿ ಸಾಂಖ್ಯಿಕ ಹಾಗೂ ಯೋಜನಾ ಜಾರಿ ಸಚಿವಾಲಯ, ಎನ್‌ಆರ್ ಐ ವ್ಯವಹಾರಗಳ ಖಾತೆ, ಯುವಜನ ಕ್ರೀಡಾ ಖಾತೆ, ಕಾರ್ಮಿಕ ಹಾಗೂ ಉದ್ಯೋಗ ಖಾತೆಗಳಂತಹ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!