Sunday, 12th May 2024

ನೈಟ್ ಕರ್ಫ್ಯೂ: ಸರ್ಕಾರದ ನಿರ್ಧಾರಕ್ಕೆ ಸಿ.ಟಿ. ರವಿ ತರಾಟೆ

C T Ravi

ಚಿಕ್ಕಮಗಳೂರು: ಮಂಗಳವಾರದಿಂದ ಹತ್ತು ದಿನಗಳ ಕಾಲ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅನಗತ್ಯವಾಗಿ ಜನರನ್ನು ಭಯಪಡಿಸುವ ಕೆಲಸ ಮಾಡಬಾರದು. ಮೂಗು ಇದ್ದ ಮೇಲೆ ನೆಗಡಿ ಬರುತ್ತೆ. ನೆಗಡಿ ಬಂದರೆ ಆತಂಕ ಪಡಬೇಕಿಲ್ಲ. ಆದರೆ ಎಚ್ಚರ ವಹಿಸಬೇಕು. ಭಯ ಹುಟ್ಟಿಸುವ ಕೆಲಸವನ್ನು ಯಾರೂ ಕೂಡ ಮಾಡಬಾರದು ಎಂದು ಹೇಳುವ ಮೂಲಕ ಸರ್ಕಾರದ ನಿರ್ಣಯಕ್ಕೆ ಚಾಟಿ ಬೀಸಿದ್ದಾರೆ.

ಇನ್ನುಳಿದಂತೆ ರಾಜ್ಯ ಸರ್ಕಾರ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ವಿಪಕ್ಷಗಳಿಗೆ ಮಾಡಲು ಬೇರೆ ಕೆಲಸವಿಲ್ಲದೇ ಹತಾಶರಾಗಿದ್ದಾರೆ. ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಗುಡುಗಿದರು.

error: Content is protected !!