Saturday, 27th July 2024

ಸಿಲಿಂಡರ್ ಸ್ಪೋಟ: ಹೋಟೆಲ್ ಮಾಲೀಕನಿಗೆ ಗಾಯ

ಬೆಂಗಳೂರು: ಸಿಲಿಂಡರ್ ಸ್ಪೋಟವಾಗಿ ಹೋಟೆಲ್ ಒಂದರಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಚಂದ್ರ ಲೇಔಟ್ ನ ಸಂತೃಪ್ತಿ ಉತ್ತರ ಕನ್ನಡ ಜವಾರಿ ಊಟದ ಮನೆಯಲ್ಲಿ ಬೆಳಿಗ್ಗೆ ಅವಘಡ ಸಂಭವಿಸಿದೆ. ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿ ಈ ಹೋಟೆಲ್ ಇದ್ದು, ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಅದೃಷ್ಟವಶಾತ್, ಘಟನೆಯಲ್ಲಿ ಹೋಟೆಲ್ ಮಾಲೀಕ ಮಹೇಶ್ ಹೊರತುಪಡಿಸಿ, ಯಾವುದೇ ಸಿಬ್ಬಂದಿ ಇರಲಿಲ್ಲ ಎಂದು ಹೇಳಲಾಗಿದೆ. ಸದ್ಯ ಹೋಟೆಲ್ ಮಾಲೀಕನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಲಾಗಿದೆ.

ಅಲ್ಲದೇ ಸ್ಥಳಕ್ಕೆ ಚಂದ್ರ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!