ಬೆಂಗಳೂರು: ಸಿಲಿಂಡರ್ ಸ್ಪೋಟವಾಗಿ ಹೋಟೆಲ್ ಒಂದರಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಚಂದ್ರ ಲೇಔಟ್ ನ ಸಂತೃಪ್ತಿ ಉತ್ತರ ಕನ್ನಡ ಜವಾರಿ ಊಟದ ಮನೆಯಲ್ಲಿ ಬೆಳಿಗ್ಗೆ ಅವಘಡ ಸಂಭವಿಸಿದೆ. ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿ ಈ ಹೋಟೆಲ್ ಇದ್ದು, ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ.