Sunday, 8th September 2024

ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಲಿತರನ್ನು ನೇಮಕ ಮಾಡಬೇಕಿತ್ತು: ಸಂಸದ ಜಿಗಜಿಣಗಿ

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿಎಸ್ ಯಡಿಯೂರಪ್ಪ ಮಗ ಬಿ ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ಸಂಸದ ರಮೇಶ್ ಜಿಗಜಿಣಗಿ, ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಲಿತರನ್ನು ನೇಮಕ ಮಾಡಬೇಕಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.

ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದಕ್ಕಾಗಿ ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರಹಾಕಿದ ಅವರು, ಅಸೆಂಬ್ಲಿ ಯಲ್ಲೂ ನೋಡಿದ್ದೇವೆ. ಲೋಕಸಭೆಯಲ್ಲೂ ನೋಡಿದ್ದೇವೆ. ಅಸೆಂಬ್ಲಿಯಲ್ಲಿ ದೊಡ್ಡ ದೊಡ್ಡ ಗೌಡರು ಸಾಹುಕಾರರುಗಳು ಬಂದರು. ಅವರಿಗೆ ಅವರ ಪರವಾಗಿ ಕೈ ಎತ್ತುತ್ತಲೇ ಇದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾವು ದಲಿತರು ನಮಗಾಗಿ ಈ ಜೀವನದಲ್ಲಿ ಯಾರು ಕೈ ಎತ್ತಿಲ್ಲ. ಪಕ್ಷದ ಹಿರಿಯರು ಯಾವ ಯಾವುದೋ ಕಾರಣಕ್ಕೆ ಮಾಡಿದ್ದಾರೆ. ಬಹಳ ಯೋಚಿಸಿ ಯಡಿಯೂರಪ್ಪ ಮಗನೇ ಆಗಬೇಕೆಂದು ನೇಮಿಸಿದ್ದಾರೆ. ಇದರಂತೆ ಬಿ.ವೈ ವಿಜಯೇಂದ್ರ ಬಿಜೆಪಿ ಅಧ್ಯಕ್ಷರಾಗಿದ್ದಾರೆ. ನಾನೇ ಬಿಜೆಪಿ ರಾಜ್ಯಾಧ್ಯಕ್ಷರಾಗಬೇಕೆಂದು ಅಂದುಕೊಂಡವನು ಅಲ್ಲ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!